ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಾಗಿಲೇ ಇಲ್ಲದ ಮಹಿಳಾ ಹಾಸ್ಟೆಲ್

ಸಮಾಜಕಲ್ಯಾಣ ಇಲಾಖೆಯ ಎಡವಟ್ಟು ಬೆಳಗಾವಿಯ ವಿದ್ಯಾರ್ಥಿನಿ ನಿಲಯದ ಸ್ನಾನಗೃಹಕ್ಕೆ ಬಾಗಿಲೇ ಇಲ್ಲ, ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು.....

ವಿಧಾನ ಸಭೆ: ಸಮಾಜಕಲ್ಯಾಣ ಇಲಾಖೆಯ ಎಡವಟ್ಟು ಬೆಳಗಾವಿಯ ವಿದ್ಯಾರ್ಥಿನಿ ನಿಲಯದ ಸ್ನಾನಗೃಹಕ್ಕೆ ಬಾಗಿಲೇ ಇಲ್ಲ, ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು
ತೆರಳಿದರೆ ಮತ್ತೊಬ್ಬರು ದ್ವಾರದ ಬಳಿ ಕಾಯಬೇಕಾದ ಪರಿಸ್ಥಿತಿ ಇದೆ. ಹಾಸ್ಟೆಲ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರೆ ಟೀಕೆ ಮಾಡುತ್ತೀರಾ ಎಂದು ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಸಮಾಜಕಲ್ಯಾಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ.ಸೋಮಣ್ಣ ಅವರೊಂದಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಹಾಸ್ಟೆಲ್‍ಗಳ ಸಮಸ್ಯೆ ಕುರಿತು ಪ್ರಸ್ತಾಪಿಸಿದರು. ಈ ವೇಳೆ ಸಚಿವರು ಕೋಟ ಶ್ರೀನಿವಾಸ ಪೂಜಾರಿ ಅವರ ಮಾತನ್ನು ಹಗುರವಾಗಿ ಪರಿಗಣಿಸಿದರು. ಇದರಿಂದ ಕೆರಳಿ ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ನೀವು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಸ್ವಾಗತಾರ್ಹವಾದರೂ, ಹಾಸ್ಟೆಲ್ ನಲ್ಲಿ ಹೋಗಿ ನಿದ್ದೆ ಮಾಡಿ ಬಂದಾಗ ನೈಜ ಚಿತ್ರಣ ದೊರೆಯುತ್ತದೆ ಎಂದರು. ಈಶ್ವರಪ್ಪ ಮಾತನಾಡಿ, ನಾವು ಹಾಸ್ಟೆಲ್ ಗಳ ಸಮೀಕ್ಷೆ ನಡೆಸಿ ವರದಿ ನೀಡುತ್ತೇವೆ. ನಂತರ ನೀವು ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯಿರಿ, ಸಮಸ್ಯೆ ಪರಿಹಾರಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT