ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಾಗಿಲೇ ಇಲ್ಲದ ಮಹಿಳಾ ಹಾಸ್ಟೆಲ್

ಸಮಾಜಕಲ್ಯಾಣ ಇಲಾಖೆಯ ಎಡವಟ್ಟು ಬೆಳಗಾವಿಯ ವಿದ್ಯಾರ್ಥಿನಿ ನಿಲಯದ ಸ್ನಾನಗೃಹಕ್ಕೆ ಬಾಗಿಲೇ ಇಲ್ಲ, ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು.....

ವಿಧಾನ ಸಭೆ: ಸಮಾಜಕಲ್ಯಾಣ ಇಲಾಖೆಯ ಎಡವಟ್ಟು ಬೆಳಗಾವಿಯ ವಿದ್ಯಾರ್ಥಿನಿ ನಿಲಯದ ಸ್ನಾನಗೃಹಕ್ಕೆ ಬಾಗಿಲೇ ಇಲ್ಲ, ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು
ತೆರಳಿದರೆ ಮತ್ತೊಬ್ಬರು ದ್ವಾರದ ಬಳಿ ಕಾಯಬೇಕಾದ ಪರಿಸ್ಥಿತಿ ಇದೆ. ಹಾಸ್ಟೆಲ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರೆ ಟೀಕೆ ಮಾಡುತ್ತೀರಾ ಎಂದು ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಸಮಾಜಕಲ್ಯಾಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ.ಸೋಮಣ್ಣ ಅವರೊಂದಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಹಾಸ್ಟೆಲ್‍ಗಳ ಸಮಸ್ಯೆ ಕುರಿತು ಪ್ರಸ್ತಾಪಿಸಿದರು. ಈ ವೇಳೆ ಸಚಿವರು ಕೋಟ ಶ್ರೀನಿವಾಸ ಪೂಜಾರಿ ಅವರ ಮಾತನ್ನು ಹಗುರವಾಗಿ ಪರಿಗಣಿಸಿದರು. ಇದರಿಂದ ಕೆರಳಿ ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ನೀವು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಸ್ವಾಗತಾರ್ಹವಾದರೂ, ಹಾಸ್ಟೆಲ್ ನಲ್ಲಿ ಹೋಗಿ ನಿದ್ದೆ ಮಾಡಿ ಬಂದಾಗ ನೈಜ ಚಿತ್ರಣ ದೊರೆಯುತ್ತದೆ ಎಂದರು. ಈಶ್ವರಪ್ಪ ಮಾತನಾಡಿ, ನಾವು ಹಾಸ್ಟೆಲ್ ಗಳ ಸಮೀಕ್ಷೆ ನಡೆಸಿ ವರದಿ ನೀಡುತ್ತೇವೆ. ನಂತರ ನೀವು ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯಿರಿ, ಸಮಸ್ಯೆ ಪರಿಹಾರಕ್ಕೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?