ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರೌಡಿ ಕಪಾಲಿಯ ನಾಲ್ವರು ಸಹಚರರ ಸೆರೆ

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ತೊಡಗಲು ಸಂಚು ರೂಪಿಸಿದ್ದ ಎರಡು ಕುಖ್ಯಾತ ರೌಡಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಅಪಹರಣ ಮಾಡಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಬಂಧಿತರು. ನಿನ್ನೆ ರಾತ್ರಿ ಮಾಗಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಅಪಹರಣ ಮಾಡಿ ದರೋಡೆ ಮಾಡಲು ಸಂಚು ರೂಪಿಸಿದ್ರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿಆರೋಪಿಗಳಿಂದ ಮೂರು ಲಾಂಗು, ಖಾರದ ಪುಡಿ ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.

ಇನ್ನು ಸಿಸಿಬಿ ಅಧಿಕಾರಿಗಳು ಕೊಲೆ, ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ರೌಡಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಪೈಪ್‌ಲೈನ್ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ  ಮಹೇಂದ್ರ, ಶಿವರಾಜು, ಸೋಪು ಮತ್ತು ಶಿವಕುಮಾರ ಬಂಧಿತ ಆರೋಪಿಗಳು.

ಬಂಧಿತರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, ಎರಡು ಕಡೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಈ ಹಿಂದೆಯೂ ಕೂಡಾ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT