ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರೌಡಿ ಕಪಾಲಿಯ ನಾಲ್ವರು ಸಹಚರರ ಸೆರೆ

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ತೊಡಗಲು ಸಂಚು ರೂಪಿಸಿದ್ದ ಎರಡು ಕುಖ್ಯಾತ ರೌಡಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಅಪಹರಣ ಮಾಡಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಬಂಧಿತರು. ನಿನ್ನೆ ರಾತ್ರಿ ಮಾಗಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಅಪಹರಣ ಮಾಡಿ ದರೋಡೆ ಮಾಡಲು ಸಂಚು ರೂಪಿಸಿದ್ರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿಆರೋಪಿಗಳಿಂದ ಮೂರು ಲಾಂಗು, ಖಾರದ ಪುಡಿ ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.

ಇನ್ನು ಸಿಸಿಬಿ ಅಧಿಕಾರಿಗಳು ಕೊಲೆ, ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ರೌಡಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಪೈಪ್‌ಲೈನ್ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ  ಮಹೇಂದ್ರ, ಶಿವರಾಜು, ಸೋಪು ಮತ್ತು ಶಿವಕುಮಾರ ಬಂಧಿತ ಆರೋಪಿಗಳು.

ಬಂಧಿತರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, ಎರಡು ಕಡೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಈ ಹಿಂದೆಯೂ ಕೂಡಾ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT