ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ 
ಜಿಲ್ಲಾ ಸುದ್ದಿ

ಹೆಗ್ಗಡೆ ಕುಟುಂಬದ ವಿರುದ್ಧ 'ಧರ್ಮ ಸೂಕ್ಷ್ಮ' ಆರೋಪ

ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರು ನಡೆಸಿರುವ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ದಾಖಲೆಗಳನ್ನು ಕ್ರೋಡೀಕರಿಸಿ `ಧರ್ಮ ಸೂಕ್ಷ್ಮ' ಎಂಬ ಪುಸ್ತಕ ಬಿಡುಗಡೆಯಾಗಿದೆ.

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರು ನಡೆಸಿರುವ ಕಾನೂನು ಬಾಹಿರ ಕೃತ್ಯಗಳು ಮತ್ತು ಅವ್ಯವಹಾರಗಳ ಕುರಿತು ಮಾಹಿತಿ ಹಕ್ಕು ಕಾಯಿದೆಯಡಿ ಅಧಿಕೃತವಾದ ದಾಖಲೆಗಳನ್ನು ಕ್ರೋಡೀಕರಿಸಿ 'ಧರ್ಮ ಸೂಕ್ಷ್ಮ' ಎಂಬ ಪುಸ್ತಕ ಹೊರತಂದಿದ್ದೇವೆ ಎಂದು ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಾಲಯವು ಖಾಸಗಿ ದೇವಾಲಯ ಎಂಬುದಾಗಿ ಹೆಗ್ಗಡೆಯವರು ಹೇಳುತ್ತಾರೆ. ಆದರೆ, ಆದಾಯ ತೆರಿಗೆ ಪಾವತಿಸುವ ಸಂದರ್ಭದಲ್ಲಿ ದೇವಾಲಯ ಸಾರ್ವಜನಿಕ ದೇವಾಲಯ ಎಂಬುದಾಗಿ ತಿಳಿಸ್, ಸರ್ಕಾರಕ್ಕೆ ಸಲ್ಲಬೇಕಾದ ಆದಾಯ ತೆರಿಗೆಯನ್ನು ವಂಚಿಸಿದ್ದಾರೆ. ಅಲ್ಲದೇ ವೀರೇಂದ್ರ ಹೆಗ್ಗಡೆ ಅವರ ಕುಟುಂಬ ಹಾಗೂ ಸಹೋದರ ಹಹರ್ಷೇಂದ್ರ ಕುಮಾರ್ ಅನೇಕ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

SCROLL FOR NEXT