ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿರುವ ಎನ್‍ಜಿಒ ಭವನದಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ನಡೆದ ರಾಜ್ಯ ಸಮಾವೇಶದಲ್ಲಿ ಅಹಿಂದ ರಾಜ್ಯಾಧ್ಯಕ್ಷ ಕೆ. ಮುಕುಡಪ್ಪ ಜೊತೆ ಸಾಹಿತಿ ಚಂ 
ಜಿಲ್ಲಾ ಸುದ್ದಿ

ದೇಶವನ್ನು ಬಿಟ್ಟು ಹೋಗಬೇಕಾದವರು ಬ್ರಾಹ್ಮಣರು: ಪ್ರೊ.ಚಂಪಾ

ಅಸಹಿಷ್ಣುತೆ ಬಗ್ಗೆ ಮಾತನಾಡಿದವರನ್ನು ದೇಶ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ.ಕೆಲವರು ಮಾತೆತ್ತಿದರೆ ದೇಶದಲ್ಲಿ ಇರಲಿಕ್ಕೆ ಲಾಯಕ್ಕಿಲ್ಲ...

ಬೆಂಗಳೂರು: ಅಸಹಿಷ್ಣುತೆ ಬಗ್ಗೆ ಮಾತನಾಡಿದವರನ್ನು ದೇಶ ವಿರೋಧಿಗಳು ಎಂದು   ಬಿಂಬಿಸಲಾಗುತ್ತಿದೆ. ಕೆಲವರು ಮಾತೆತ್ತಿದರೆ ದೇಶದಲ್ಲಿ ಇರಲಿಕ್ಕೆ ಲಾಯಕ್ಕಿಲ್ಲ ಎಂದು  ಹೇಳುತ್ತಿದ್ದಾರೆ. ಹೀಗೆ ಹೇಳುವುದಕ್ಕೆ ಇವರ್ಯಾರು? ಮೊಟ್ಟ ಮೊದಲು ಈ ದೇಶವನ್ನು ಬಿಟ್ಟು  ಹೋಗಬೇಕಾದವರು ಬ್ರಾಹ್ಮಣರು. ರಾಷ್ಟ್ರ ಬಿಟ್ಟು ಹೋಗಬೇಕಾದರೆ ಹೋಗಲಿ, ಹೋಗಿ ಅಂತ  ನಾನು ಹೇಳಲಾರೆ ಎಂದು ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ ಹೇಳಿದರು.

ಎನ್‍ಜಿಒ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ  ದಿನದ  ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಆಮೀರ್ ಖಾನ್ ದೇಶದಲ್ಲಿ  ನಡೆಯುತ್ತಿರುವ ಪ್ರಸಕ್ತ ಸನ್ನಿವೇಶದ ಕುರಿತು ಹೇಳಿಕೆ ನೀಡಿದ್ದನ್ನೇ ದೊಡ್ಡದು ಮಾಡಿ ರಾಷ್ಟ್ರ ಬಿಟ್ಟು  ಹೋಗುವಂತೆ ಕೋಮುವಾದಿಗಳು ಹೇಳುತ್ತಿದ್ದಾರೆ. ಆದರೆ ಆಮೀರ್ ಖಾನ್ ಯಾವುದೇ ರಾಜಕೀಯ ಪಕ್ಷದ ವಕ್ತಾರನಲ್ಲ. ವಸ್ತುಸ್ಥಿತಿಯನ್ನು  ಹೇಳಿದ್ದನ್ನೇ ದೊಡ್ಡದು ಮಾಡಿ ದೇಶದಲ್ಲಿ ಕೋಲಾಹಲ  ಸೃಷ್ಟಿಸಿದರು ಎಂದು ಟೀಕಿಸಿದರು.

ದೇಶದ ಮೂಲ ನಿವಾಸಿಗಳಾದ ದ್ರಾವಿಡರ ಅಧಿಕಾರ, ಹಣ, ಆಸ್ತಿ ಮತ್ತು ಬದುಕುವ ಸ್ವಾತಂತ್ರ್ಯವನ್ನು ಆರ್ಯರು ಕಿತ್ತುಕೊಂಡು ಶೋಷಣೆ ಮಾಡಿದರು. ಇವರ ದಬ್ಬಾಳಿಕೆ ಇನ್ನೂ  ಮುಂದುವರಿದಿದೆ. ಈ ದೇಶದ ಮೇಲೆ ಮೂಲಭೂತ ಹಕ್ಕು ಇರುವುದು ದ್ರಾವಿಡರಾದ ನಮ್ಮದು ಎಂದು  ಹೇಳಿದರು.

ಅನೇಕ ದಾರ್ಶನಿಕರು ಸಾವಿರಾರು ವರ್ಷಗಳಿಂದ ಹೋರಾಟ ಮಾಡಿದರೂ ಜಾತೀಯತೆ ಬೇರು  ಆಳಕ್ಕೆ ಹೋಗುತ್ತಿದೆ ಹೊರತು, ಪರಿಹರಿಸಲು ಸಾಧ್ಯವಾಗುತ್ತಿಲ್ಲ. ಸದಾಶಿವ ಆಯೋಗದ ಬಗ್ಗೆ  ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ.
●ಎಚ್. ಆಂಜನೇಯ ಸಚಿವ

ಮಹಾತ್ಮರ ಹೆಸರಿನಲ್ಲಿ ಸರ್ಕಾರಿ ರಜೆ ಪಡೆದು ಕಾಯಕ ಮರೆಯುತ್ತಿದ್ದೇವೆ. ಇದರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಗಾಂಧಿ ಜಯಂತಿ,  ಅಂಬೇಡ್ಕರ್ ಜಯಂತಿಯನ್ನು ರಾಷ್ಟ್ರೀಯ ದಿನಾಚರಣೆ ಮಾಡಿ ಸಾರ್ವತ್ರಿಕ ರಜೆ ನೀಡಬೇಕು.
●ಪ್ರೊ.ಚಂಪಾ, ಸಾಹಿತಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel