ಗೂಗಲ್ ಮ್ಯಾಪ್ 
ಜಿಲ್ಲಾ ಸುದ್ದಿ

ಅಪರೂಪದ ವೀರಗಲ್ಲು ಪತ್ತೆ

ತಾಲೂಕಿನ ಜಯಪುರದಲ್ಲಿ ಎಚ್.ಡಿ. ಕೋಟೆಗೆ ಹೋಗುವ ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಗುಜ್ಜಾರಮ್ಮ ದೇಗುಲ ಆವರಣದಲ್ಲಿ ಕರ್ನಾಟಕದಲ್ಲೇ ಅಪರೂಪದ ...

ಮೈಸೂರು: ತಾಲೂಕಿನ ಜಯಪುರದಲ್ಲಿ ಎಚ್.ಡಿ. ಕೋಟೆಗೆ ಹೋಗುವ ಮುಖ್ಯ ರಸ್ತೆಯ ಬಲಭಾಗದಲ್ಲಿರುವ ಗುಜ್ಜಾರಮ್ಮ ದೇಗುಲ ಆವರಣದಲ್ಲಿ ಕರ್ನಾಟಕದಲ್ಲೇ ಅಪರೂಪದ ದೋಣಿ ಇರುವ ವೀರಗಲ್ಲು ಪತ್ತೆಯಾಗಿದೆ.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಎಸ್.ಜಿ. ರಾಮದಾಸ ರೆಡ್ಡಿ ಅವರು ಎನ್‍ಎಸ್‍ಎಸ್ ತಂಡದೊಂದಿಗೆ ಕ್ಷೇತ್ರ ಕಾರ್ಯ ಮಾಡಿ ಇದನ್ನು ಪತ್ತೆ ಹಚ್ಚಿದ್ದಾರೆ. ದೇಗುಲ ಆವರಣದಲ್ಲಿ 55 ವೀರಗಲ್ಲು, ಮಾಸ್ತಿಕಲ್ಲುಗಳಿದ್ದು, ಅವುಗಳಲ್ಲಿ ಒಂದಾದ ಅಪರೂಪದ ದೋಣಿ ಇರುವ ವೀರಗಲ್ಲು ಹಸಿರು ಗ್ರಾನೈಟ್ ಕಲ್ಲಿನಲ್ಲಿದೆ.ಎತ್ತರ 90 ಸೆಂ.ಮೀ, ಅಗಲ 30 ಸೆಂ.ಮೀ ಇದೆ.

ಇದು ಎರಡು ಹಂತಗಳಲ್ಲಿದ್ದು, ಒಂದನೇ ಹಂತದಲ್ಲಿ ದೋಣಿಯಲ್ಲಿ ಇಬ್ಬರು ವ್ಯಕ್ತಿಗಳ ನಡುವಿನ ಕಾಳಗ ಚಿತ್ರವಿದೆ. ಎರಡನೇ ಹಂತದಲ್ಲಿ  ಕೃಷ್ಣನ ರೀತಿಯ ಕೊಳಲನೂದುವ ವ್ಯಕ್ತಿಯನ್ನು ಚಿತ್ರಿಸಲಾಗಿದೆ. ಶಿಲ್ಪ ಶೈಲಿ ಗಮನಿಸಿದಾಗ ಸುಮಾರು 14-15 ನೇ ಶತಮಾನದ ವೀರಗಲ್ಲಾಗಿದೆ.  

ದೋಣಿಯಲ್ಲಿರುವ ವ್ಯಕ್ತಿ ಕಡಲ್ಗಳ್ಳನ (ಕಳ್ಳ) ? ನ ಜೊತೆ ಹೋರಾಡಿ ವೀರ ಮರಣ ಹೊಂದಿರಬೇಕು. ವೈಷ್ಣವ ಧರ್ಮದ ಮೇಲೆ ಬೆಳಕು ಚೆಲ್ಲುವ ವಿಶೇಷ ವೀರಗಲ್ಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT