ಡಾ. ಸ್ವಾಮಿರಾವ್ ಕುಲಕರ್ಣಿ 
ಜಿಲ್ಲಾ ಸುದ್ದಿ

ಕನಕಶ್ರೀ ಪುರಸ್ಕಾರಕ್ಕೆ ಡಾ.ಸ್ವಾಮಿರಾವ್ ಆಯ್ಕೆ

ರಿಯ ಸಾಹಿತಿ, ದಾಸ ಸಾಹಿತ್ಯ ವಿದ್ವಾಂಸರಾದ ಡಾ. ಸ್ವಾಮಿರಾವ್ ಕುಲಕರ್ಣಿ ಅವರಿಗೆ ಕರ್ನಾಟಕ ರಾಜ್ಯ ನೀಡುವ ರಾಜ್ಯ ಮಟ್ಟದ ಕನಕಶ್ರೀ ಪ್ರಶಸ್ತಿ ದೊರಕಿದೆ...

ಬೆಂಗಳೂರು: ಹಿರಿಯ ಸಾಹಿತಿ, ದಾಸ ಸಾಹಿತ್ಯ ವಿದ್ವಾಂಸರಾದ ಡಾ. ಸ್ವಾಮಿರಾವ್ ಕುಲಕರ್ಣಿ ಅವರಿಗೆ ಕರ್ನಾಟಕ ರಾಜ್ಯ ನೀಡುವ ರಾಜ್ಯ ಮಟ್ಟದ ಕನಕಶ್ರೀ ಪ್ರಶಸ್ತಿ ದೊರಕಿದೆ.

ಕನಕದಾಸ ಜಯಂತಿ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಸಭಾಗೃಹದಲ್ಲಿ ನ.28ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ರು. 5 ಲಕ್ಷ ನಗದು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸ್ವಾಮಿರಾವ್ ಕುಲಕರ್ಣಿ 35 ವರ್ಷ ಕಾಲ ದಾಸ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಕ್ಷೇತ್ರ ಕಾರ್ಯದ ಮುಖಾಂತರ ಈ ಭಾಗದ ದಾಸರ ಬದುಕು ಹಾಗೂ ಸಾಹಿತ್ಯವನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಇಸ್ಲಾಂ ಧರ್ಮದ ಬಡೇ ಸಾಬ್ ಶ್ರೀರಾಮದಾಸರು ದಾಸ ಸಾಹಿತ್ಯಕ್ಕೆ ನೀಡಿರುವ ಸಾವಿರಾರು ಕೀರ್ತನೆಗಳು ಸಂಗ್ರಹಿಸಿ ಅವರ ಕುರಿತು ಡಾ. ಚನ್ನಣ್ಣ ವಾಲೀಕಾರ್ ಮಾರ್ಗದರ್ಶನದಲ್ಲಿ 1995ರಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಹರಿದಾಸ ಸಾಹಿತ್ಯ ವಿಚಾರ ವಾಹಿನಿ ಸಂಸ್ಥಾಪಕ ಅಧ್ಯಕ್ಷರಾಗಿ 15ವರ್ಷಗಳಿಂದ ಹರಿದಾಸ ವೈಭವ ಎಂಬ ಕಾರ್ಯಕ್ರಮದ ಮೂಲಕ ದಾಸರ ಸಾಮಾಜಿಕ, ವೈಚಾರಿಕ ಚಿಂತನೆಗಳನ್ನು ಜನಮನಕ್ಕೆ ಮುಟ್ಟಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ದಾಸ ಸಾಹಿತ್ಯದ ವಿವಿಧ ವಿಷಯ ಕುರಿತು ಈವರೆಗೆ ಸ್ವಾಮಿರಾವ್ ಅವರ 12 ಪುಸ್ತಕಗಳು ಪ್ರಕಟವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT