ಡಾ. ಸ್ವಾಮಿರಾವ್ ಕುಲಕರ್ಣಿ 
ಜಿಲ್ಲಾ ಸುದ್ದಿ

ಕನಕಶ್ರೀ ಪುರಸ್ಕಾರಕ್ಕೆ ಡಾ.ಸ್ವಾಮಿರಾವ್ ಆಯ್ಕೆ

ರಿಯ ಸಾಹಿತಿ, ದಾಸ ಸಾಹಿತ್ಯ ವಿದ್ವಾಂಸರಾದ ಡಾ. ಸ್ವಾಮಿರಾವ್ ಕುಲಕರ್ಣಿ ಅವರಿಗೆ ಕರ್ನಾಟಕ ರಾಜ್ಯ ನೀಡುವ ರಾಜ್ಯ ಮಟ್ಟದ ಕನಕಶ್ರೀ ಪ್ರಶಸ್ತಿ ದೊರಕಿದೆ...

ಬೆಂಗಳೂರು: ಹಿರಿಯ ಸಾಹಿತಿ, ದಾಸ ಸಾಹಿತ್ಯ ವಿದ್ವಾಂಸರಾದ ಡಾ. ಸ್ವಾಮಿರಾವ್ ಕುಲಕರ್ಣಿ ಅವರಿಗೆ ಕರ್ನಾಟಕ ರಾಜ್ಯ ನೀಡುವ ರಾಜ್ಯ ಮಟ್ಟದ ಕನಕಶ್ರೀ ಪ್ರಶಸ್ತಿ ದೊರಕಿದೆ.

ಕನಕದಾಸ ಜಯಂತಿ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಸಭಾಗೃಹದಲ್ಲಿ ನ.28ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ರು. 5 ಲಕ್ಷ ನಗದು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸ್ವಾಮಿರಾವ್ ಕುಲಕರ್ಣಿ 35 ವರ್ಷ ಕಾಲ ದಾಸ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಕ್ಷೇತ್ರ ಕಾರ್ಯದ ಮುಖಾಂತರ ಈ ಭಾಗದ ದಾಸರ ಬದುಕು ಹಾಗೂ ಸಾಹಿತ್ಯವನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಇಸ್ಲಾಂ ಧರ್ಮದ ಬಡೇ ಸಾಬ್ ಶ್ರೀರಾಮದಾಸರು ದಾಸ ಸಾಹಿತ್ಯಕ್ಕೆ ನೀಡಿರುವ ಸಾವಿರಾರು ಕೀರ್ತನೆಗಳು ಸಂಗ್ರಹಿಸಿ ಅವರ ಕುರಿತು ಡಾ. ಚನ್ನಣ್ಣ ವಾಲೀಕಾರ್ ಮಾರ್ಗದರ್ಶನದಲ್ಲಿ 1995ರಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಹರಿದಾಸ ಸಾಹಿತ್ಯ ವಿಚಾರ ವಾಹಿನಿ ಸಂಸ್ಥಾಪಕ ಅಧ್ಯಕ್ಷರಾಗಿ 15ವರ್ಷಗಳಿಂದ ಹರಿದಾಸ ವೈಭವ ಎಂಬ ಕಾರ್ಯಕ್ರಮದ ಮೂಲಕ ದಾಸರ ಸಾಮಾಜಿಕ, ವೈಚಾರಿಕ ಚಿಂತನೆಗಳನ್ನು ಜನಮನಕ್ಕೆ ಮುಟ್ಟಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ದಾಸ ಸಾಹಿತ್ಯದ ವಿವಿಧ ವಿಷಯ ಕುರಿತು ಈವರೆಗೆ ಸ್ವಾಮಿರಾವ್ ಅವರ 12 ಪುಸ್ತಕಗಳು ಪ್ರಕಟವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT