ಗೃಹ ಸಚಿವ ಪರಮೇಶ್ವರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕುಟ್ಟಪ್ಪ ಹತ್ಯೆ ಸತ್ಯ ಬಿಚ್ಚಿಟ್ಟ ಗೃಹ ಇಲಾಖೆ

ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಕೇರಳ ಹಾಗೂ ಇತರ ಕಡೆಯಿಂದ ಸುಮಾರು 5ರಿಂದ 6 ಸಾವಿರ ಜನ ಪಾಲ್ಗೊಂಡಿದ್ದರು ಎಂದು ಗೃಹ ಇಲಾಖೆ ಮಾಹಿತಿ ನೀಡಿದೆ...

ವಿಧಾನಪರಿಷತ್: ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಕೇರಳ ಹಾಗೂ ಇತರ ಕಡೆಯಿಂದ ಸುಮಾರು 5ರಿಂದ 6 ಸಾವಿರ ಜನ ಪಾಲ್ಗೊಂಡಿದ್ದರು ಎಂದು ಗೃಹ
ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕಾನೂನು ವ್ಯವಸ್ಥೆ ಕುರಿತು ನಡೆದ ಚರ್ಚೆಗೆ ಲಿಖಿತ ಉತ್ತರ ಮಂಡಿಸಿದ ಗೃಹ ಸಚಿವ ಪರಮೇಶ್ವರ್, ಪ್ರಮುಖವಾಗಿ ಕೊಡಗು ಘಟನೆಯ ಹಿನ್ನೆಲೆಯನ್ನು ಅವರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ಟಿಪ್ಪು ಸುಲ್ತಾನ್ ಅಭಿಮಾನಿಗಳ ಸಂಘ, ಎಸ್‍ಡಿಪಿಐ, ಪಿಎಫ್ಐ ಕಾರ್ಯಕರ್ತರು ಸಹ ಮಡಿಕೇರಿಯ ಟಿಪ್ಪು ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರೆಂದು ವರದಿಯಲ್ಲಿ ಹೇಳಲಾಗಿದೆ.

ಮಡಿಕೇರಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ ಹಿಂದೂಪರ ಸಂಘಟನೆಯ ಮುಖಂಡರು ಹಾಗೂ ಕಾರ್ಯ ಕರ್ತರು ಟಿಪ್ಪು ಜಯಂತಿಯ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಕೆಲವರು ಕಲ್ಲು ತೂರಾಟ ನಡೆಸಿದಾಗ ಪರಿಸ್ಥಿತಿ ಹತೋಟಿಗೆ ತರಲು ನಿಷೇಧಾಜ್ಞೆ ಜಾರಿ ಮಾಡಿ. ಅಶ್ರುವಾಯು ಸಿಡಿಸಿ, ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಯಿತು ಎಂದು ಸದನಕ್ಕೆ ಮಾಹಿತಿ ನೀಡಲಾಗಿದೆ.

ಜಗದೀಶ್‍ಗೆ ಶೌರ್ಯ ಪ್ರಶಸ್ತಿಗೆ: ಶಿಫಾರಸು
ಕಳ್ಳರಿಂದ ಹತ್ಯೆಗೊಳಗಾದ ಕರ್ತವ್ಯ ನಿರತ ಸಬ್ ಇನ್‍ಸ್ಪೆಕ್ಟರ್ ಜಗದೀಶ್ ಅವರಿಗೆ ಶೌರ್ಯ ಪ್ರಶಸ್ತಿ ನೀಡುವಂತೆ ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ. ಮೇಲ್ಮನೆಯಲ್ಲಿ ಗೃಹ ಸಚಿವರು ಮಂಡಿಸಿದ ಲಿಖಿತ ಉತ್ತರದಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೊಲೆ ಬೇಧಿಸಿದ ಪೊಲೀಸ್ ತಂಡಕ್ಕೆ ರು.10 ಲಕ್ಷ ಬಹುಮಾನ ಘೋಷಿಸಲಾಗಿದೆ. ಮೃತರ ಕುಟುಂಬಕ್ಕೆ ರು.30 ಲಕ್ಷ ಪರಿಹಾರ ನೀಡಲಾಗಿದೆ. ಇನ್ನೂ ರು.20 ಲಕ್ಷ ಮೊತ್ತವನ್ನು ಸಮೂಹ ವಿಮಾ ಮಂಜೂರಾತಿಗಾಗಿ ವಿಮಾ ಕಂಪನಿಗೆ ಸಲ್ಲಿಸಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ