ಸಚಿವ ಟಿ.ಬಿ. ಜಯಚಂದ್ರ 
ಜಿಲ್ಲಾ ಸುದ್ದಿ

ರಾಜಸ್ವ ಸಂಗ್ರಹದಲ್ಲಿ ಸುಧಾರಣೆ

ಪ್ರಸಕ್ತ ಸಾಲಿನ ಪೂರಕ ಅಂದಾಜುಗಳ 3ನೇ ಕಂತಿನ ಮಂಡನೆಯನ್ನು ಕೈ ಬಿಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿದೆ...

ವಿಧಾನಸಭೆ: ಪ್ರಸಕ್ತ ಸಾಲಿನ ಪೂರಕ ಅಂದಾಜುಗಳ 3ನೇ ಕಂತಿನ ಮಂಡನೆಯನ್ನು ಕೈ ಬಿಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿದೆ.

ಸರ್ಕಾರ ರಾಜಸ್ವ ಸಂಗ್ರಹದಲ್ಲಿ ಸುಧಾರಿಸಿಕೊಂಡಿದ್ದು, ವಿತ್ತೀಯ ಕೊರತೆಯನ್ನು ಸರಿದೂಗಿಸಿಕೊಂಡಿದೆ. ಹೀಗಾಗಿ ಮೂರನೇ ಕಂತಿನ ಪೂರೈಕೆ ಅಂದಾಜು ಮಂಡನೆಯನ್ನು ಕೈಬಿಡಬಹುದು ಎಂದು ಚಿಂತಿಸುತ್ತಿದೆ.

ಸರ್ಕಾರದ ಹಣಕಾಸು ಸ್ಥಿತಿಯ ಮಧ್ಯವಾರ್ಷಿಕ ಪರಿಶೀಲನಾ ವರದಿನಯ್ನು ಸಚಿವ ಜಯಚಂದ್ರ ಶುಕ್ರವಾರ ಸದನದಲ್ಲಿ ಮಂಡಿಸಿದರು. ನಂತರ ಇದನ್ನು ಸದನದಲ್ಲಿ ಅಂಗೀಕರಿಸಲಾಯಿತು.

ಆರ್ಥಿಕ ಹೊಣೆಗಾರಿಗೆ ಅಧಿ ನಿಯಮದ ಪ್ರಕಾರ ವಿತ್ತೀಯ ಕೊರತೆ ಜಿಎಸ್ ಡಿಪಿಯ ಶೇ.3ರ ಮಿತಿಯೊಳಗಿರಬೇಕು. ಅದಕ್ಕೆ ಅನುಗುಣವಾಗಿ ಈ ಸಾಲಿನಲ್ಲಿ ವಿತ್ತೀಯ ಕೊರತೆ ಶೇ.2.75ರಷ್ಟಿದೆ. ಅಂದರೆ, ಬಜೆಟ್ ಸಂದರ್ಭದಲ್ಲಿ ಈ ಸಾಲಿನ ರು.20.220 ಕೋಟಿಗಳೆಂದು ಅಂದಾಜಿಸಲಾಗಿತ್ತು. ಇದಕ್ಕೆ ಹೋಲಿಸಿದರೆ, ಸೆಪ್ಟೆಂಬರ್ ಅಂತ್ಯಕ್ಕೆ ವಿತ್ತೀಯ ಕೊರತೆ ರು.1,256 ಕೋಟಿ ಇದೆ.

ಸೆಪ್ಟೆಂಬರ್ ಅಂತ್ಯಕ್ಕೆ 6 ತಿಂಗಳ ರಾಜಸ್ವ ಜಮೆ ರು.54, 192 ಕೋಟಿ. ಅದರಲ್ಲಿ ಸ್ವಂತ ತೆರಿಗೆ ರಾಜಸ್ವ ರು.35,671 ಕೋಟಿ. ಹಿಂದಿನ ಸಾಲಿಗೆ ಹೋಲಿಸಿದರೆ, ಇದು ಶೇ. 46 ರಷ್ಟಿದೆ. ಅಂದರೆ ಶೇ.11.94 ರಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT