ವಸತಿ ಸಚಿವ ಅಂಬರೀಷ ಹಾಗೂ ಪತ್ನಿ ಸುಮಲತಾ 
ಜಿಲ್ಲಾ ಸುದ್ದಿ

ವಸತಿ ಸಚಿವ ಅಂಬರೀಷ ಪತ್ನಿ ಸೋದರಿಗೂ ರು.42 ಲಕ್ಷ ವಂಚನೆ!

ಜೀವ ವಿಮೆ ಮಾಡಿಸಿಕೊಡುವುದಾಗಿ ಗ್ರಾಹಕರನ್ನು ನಂಬಿಸಿ ಲಕ್ಷಾಂತರ ಹಣ ಪಡೆದು ತಲೆಮರೆಸಿಕೊಂಡಿರುವ ಎಚ್‍ಡಿಎಫ್ ಸಿ ಜೀವ ವಿಮೆ ಶಾಖೆ ವ್ಯವಸ್ಥಾಪಕಿ ವಿಶಾಲಾಕ್ಷಿ ಭಟ್, ವಸತಿ ಸಚಿವ ಅಂಬರೀಷ ಅವರ ಪತ್ನಿ ಸುಮಲತಾ...

ಬೆಂಗಳೂರು: ಜೀವ ವಿಮೆ ಮಾಡಿಸಿಕೊಡುವುದಾಗಿ ಗ್ರಾಹಕರನ್ನು ನಂಬಿಸಿ ಲಕ್ಷಾಂತರ ಹಣ ಪಡೆದು ತಲೆಮರೆಸಿಕೊಂಡಿರುವ ಎಚ್‍ಡಿಎಫ್ ಸಿ ಜೀವ ವಿಮೆ ಶಾಖೆ ವ್ಯವಸ್ಥಾಪಕಿ ವಿಶಾಲಾಕ್ಷಿ ಭಟ್, ವಸತಿ ಸಚಿವ ಅಂಬರೀಷ ಅವರ ಪತ್ನಿ ಸುಮಲತಾ ಅವರ ಸಹೋದರಿಗೂ ರು.42 ಲಕ್ಷ ಪಡೆದು ವಂಚಿಸಿದ್ದಾರೆ.

ಚಿತ್ರನಟಿ ಸುಮಲತಾ ಅವರಿಗೆ ಸಂಬಂಧದಲ್ಲಿ ಸಹೋದರಿಯಾದ ರೇಣುಕಾದೇವಿ ಅವರಿಗೂ ವಿಶಾಲಾಕ್ಷಿ ಭಟ್ ವಂಚಿಸಿರುವ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶಾಲಕ್ಷಿ ಭಟ್ ಅವರಿಗೆ ರು.52 ಲಕ್ಷ ನೀಡಿದ್ದೆ. ಅದರಲ್ಲಿ ರು.10 ಲಕ್ಷ ವಾಪಸ್ ನೀಡಿದ್ದಾರೆ.

ಉಳಿದ ರು.42 ಲಕ್ಷ ನೀಡಬೇಕಿತ್ತು. ಆದರೆ, ಏಕಾಏಕಿ ಅವರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡಿ ತಮ್ಮ ಹಣವನ್ನು ಕೊಡಿಸಿ ಎಂದು 15 ದಿನಗಳ ಹಿಂದೆ ದೂರು ದಾಖಲಿಸಿದ್ದಾರೆ. ವಿಶಾಲಾಕ್ಷಿ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ
ದಾಖಲಾಗಿದ್ದು ಆಕೆಗಾಗಿ ಹುಡುಕಾಟ ನಡೆದಿದೆ.  ನಾವು ಕೂಡಾ ಶೋಧ ಕಾರ್ಯ ನಡೆಸಿದ್ದೇವೆಂದು ಪೊಲೀಸರು ಹೇಳಿದ್ದಾರೆ.

ನಾಪತ್ತೆ
ವಿಮೆ ಮಾಡಿಸಿಕೊಡುವುದಾಗಿ ರು.10 ಲಕ್ಷ ಪಡೆದು, ವಂಚಿಸಿದ್ದಾರೆಂದು ಶ್ರೀನಿವಾಸ್ ಎಂಬುವರು ಮಡಿವಾಳ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಶಿರಸಿ ಮೂಲದ ಅಪರ್ಣಾ ಹಂಸ ಎಂಬವರಿರೂ ರು.36 ಲಕ್ಷ ವಂಚಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರಕರಣಗಳು ದಾಖಲಾಗಿವೆ ಈ ಮೂಲಕ ಇದು ಬಹುಕೋಟಿ ವಂಚನೆ ಪ್ರಕರಣ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT