ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 
ಜಿಲ್ಲಾ ಸುದ್ದಿ

ಪಾಲಿಕೆಯಿಂದ ನಾಲ್ಕು ಡಾಂಬರ್ ಘಟಕ

ರಸ್ತೆ ಗುಂಡಿಗಳ ದುರಸ್ತಿಗಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ನಗರದ ನಾಲ್ಕು ಕಡೆಗಳಲ್ಲಿ...

ಬೆಂಗಳೂರು: ರಸ್ತೆ ಗುಂಡಿಗಳ ದುರಸ್ತಿಗಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ವತಿಯಿಂದಲೇ ನಗರದ ನಾಲ್ಕು ಕಡೆಗಳಲ್ಲಿ
ಡಾಂಬರ್ ಘಟಕಗಳನ್ನು ಆರಂಭಿಸಲಾಗುತ್ತಿದೆ. ಕಣ್ಣೂರು, ಮಲ್ಲಸಂದ್ರ, ಸುಂಕದಕಟ್ಟೆ ಹಾಗೂ ಚಿಕ್ಕನಾಗಮಂಗಲದಲ್ಲಿ ನೂತನ ಘಟಕಗಳು ಪ್ರಾರಂಭವಾಗಲಿವೆ. ಈ ಹಿಂದೆ
ಪಾಲಿಕೆಯೇ ಆರಂಭಿಸಿದ್ದ ಡಾಂಬರ್ ಘಟಕ ಕೆಲ ನ್ಯೂನತೆಗಳಿಂದ ಮುಚ್ಚಲ್ಪಟ್ಟಿತ್ತು. ಹೀಗಾಗಿ ರಸ್ತೆ ದುರಸ್ತಿಗೆ ಗುತ್ತಿಗೆದಾರರನ್ನೇ ಅವಲಂಬಿಸಬೇಕಾದ ಅನಿವಾರ್ಯತೆ
ಇತ್ತು. ಈಗ ಪಾಲಿಕೆ ಸ್ವಂತ ಘಟಕಗಳ ಸ್ಥಾಪನೆಗೆ ಮುಂದಾಗಿದೆ. ಪಾಲಿಕೆಯು ಪ್ರತಿಯೊಂದು ಘಟಕಕ್ಕೆ 5 ಎಕರೆ ಭೂಮಿಯನ್ನು ನೀಡಲು ಮುಂದಾಗಿದೆ. ಘಟಕ ಸ್ಥಾಪನೆ ಹಾಗೂ ನಿರ್ವಹಣೆಯನ್ನು ಕಂಪನಿಯೇ ನೋಡಿಕೊಳ್ಳಲಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಡಾಂಬರ್ ಕೊಡುವ ಬಗ್ಗೆ ಪಾಲಿಕೆಯು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಈ ಮೂಲಕ ಗುತ್ತಿಗೆದಾರರ ಮೇಲೆ ಅವಲಂಬನೆ ತಪ್ಪಲಿದೆ. ಜೊತೆಗೆ ದುರಸ್ತಿಗೆ ಗುಣಮಟ್ಟದ ಡಾಂಬರ್ ಬಳಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT