ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು: ರಸ್ತೆ ಗುಂಡಿಗಳ ದುರಸ್ತಿಗಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ನಗರದ ನಾಲ್ಕು ಕಡೆಗಳಲ್ಲಿ
ಡಾಂಬರ್ ಘಟಕಗಳನ್ನು ಆರಂಭಿಸಲಾಗುತ್ತಿದೆ. ಕಣ್ಣೂರು, ಮಲ್ಲಸಂದ್ರ, ಸುಂಕದಕಟ್ಟೆ ಹಾಗೂ ಚಿಕ್ಕನಾಗಮಂಗಲದಲ್ಲಿ ನೂತನ ಘಟಕಗಳು ಪ್ರಾರಂಭವಾಗಲಿವೆ. ಈ ಹಿಂದೆ
ಪಾಲಿಕೆಯೇ ಆರಂಭಿಸಿದ್ದ ಡಾಂಬರ್ ಘಟಕ ಕೆಲ ನ್ಯೂನತೆಗಳಿಂದ ಮುಚ್ಚಲ್ಪಟ್ಟಿತ್ತು. ಹೀಗಾಗಿ ರಸ್ತೆ ದುರಸ್ತಿಗೆ ಗುತ್ತಿಗೆದಾರರನ್ನೇ ಅವಲಂಬಿಸಬೇಕಾದ ಅನಿವಾರ್ಯತೆ
ಇತ್ತು. ಈಗ ಪಾಲಿಕೆ ಸ್ವಂತ ಘಟಕಗಳ ಸ್ಥಾಪನೆಗೆ ಮುಂದಾಗಿದೆ. ಪಾಲಿಕೆಯು ಪ್ರತಿಯೊಂದು ಘಟಕಕ್ಕೆ 5 ಎಕರೆ ಭೂಮಿಯನ್ನು ನೀಡಲು ಮುಂದಾಗಿದೆ. ಘಟಕ ಸ್ಥಾಪನೆ ಹಾಗೂ ನಿರ್ವಹಣೆಯನ್ನು ಕಂಪನಿಯೇ ನೋಡಿಕೊಳ್ಳಲಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಡಾಂಬರ್ ಕೊಡುವ ಬಗ್ಗೆ ಪಾಲಿಕೆಯು ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಈ ಮೂಲಕ ಗುತ್ತಿಗೆದಾರರ ಮೇಲೆ ಅವಲಂಬನೆ ತಪ್ಪಲಿದೆ. ಜೊತೆಗೆ ದುರಸ್ತಿಗೆ ಗುಣಮಟ್ಟದ ಡಾಂಬರ್ ಬಳಸಬಹುದಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos