ಕಬ್ಬನ್ ಉದ್ಯಾ ನದಲ್ಲಿ ಸಂಗೀತ, ನೃತ್ಯಗಳ ಸಂಗಮ (ಕೃಪೆ : ಕೆಪಿಎನ್ ) 
ಜಿಲ್ಲಾ ಸುದ್ದಿ

ಉದ್ಯಾನದಲ್ಲಿ ಸಂಗೀತ, ನೃತ್ಯದ ಸಂಗಮ

ಪ್ರತಿ ಭಾನುವಾರ ನಗರದ ಕಬ್ಬನ್ ಉದ್ಯಾ ನದಲ್ಲಿ ಸಂಗೀತ, ನೃತ್ಯಗಳ ಸಂಗಮ. ಪ್ರತಿ ವಾರವೂ ವಿಶೇಷ ಕಾರ್ಯಕ್ರಮಗಳು ವಾಯುವಿಹಾರಿಗಳಿಗೆ...

ಬೆಂಗಳೂರು: ಪ್ರತಿ ಭಾನುವಾರ ನಗರದ ಕಬ್ಬನ್ ಉದ್ಯಾ ನದಲ್ಲಿ ಸಂಗೀತ, ನೃತ್ಯಗಳ ಸಂಗಮ. ಪ್ರತಿ ವಾರವೂ ವಿಶೇಷ ಕಾರ್ಯಕ್ರಮಗಳು ವಾಯುವಿಹಾರಿಗಳಿಗೆ ಮುದನೀಡುತ್ತಿವೆ. ಈ ವಾರವೂ ಉದ್ಯಾನದಲ್ಲಿ ಉದಯ ರಾಗ ಕಾರ್ಯಕ್ರಮದಲ್ಲಿ ಗಂಗಾಧರ ಸ್ವಾಮಿ ಮತ್ತು ತಂಡದವರಿಂದ ಭಕ್ತಿಗೀತೆ ಹಾಗೂ ಜನಪದಗೀತೆಗಳ ಗಾಯನ ನಡೆಯಿತು.ಬೆಳಗ್ಗೆ 7ರಿಂದ ಯೂನಿವರ್ಸ್ ಆರ್ಟ್  ಫೌಂಡೇಶನ್ ಸಹಯೋಗದಲ್ಲಿ ಆರತಿ ವಿಜಯಕುಮಾರ್ ಅವರಿಂದ ಭರತನಾಟ್ಯ,ದಿ ಸಂಸ್ಕೃತಿ ಟೆಂಪಲ್ ಆಫ್  ಆರ್ಟ್ ವತಿಯಿಂದ ನೃತ್ಯ ಪ್ರದರ್ಶನ ಮತ್ತು ಗುರುನಾಗಶ್ರೀ ಅವರಿಂದ ಜಾನಪದ ನೃತ್ಯ ಕಾರ್ಯಕ್ರಮ ಉದ್ಯಾನಕ್ಕೆ ಮೆರುಗು ನೀಡಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಅಕ್ಷಯ ಫೌಂಡೇಶನ್ ವತಿಯಿಂದ ಕನ್ನಡ ಪ್ರಾಧ್ಯಾಪಕ ರವಿಕುಮಾರ್ ನಿಹಾ ಅವರಿಂದ ಶಾಂತಕವಿಯ ಕನ್ನಡ ಪರಿಕಲ್ಪನೆ ಕುರಿತು ವಿಶೇಷ ಉಪನ್ಯಾಸ, ಇದರೊಂದಿಗೆ ರೇಷ್ಮೆ ಇಲಾಖೆಯಿಂದ ರೇಷ್ಮೆಗೂಡಿನಿಂದ ಮಾಡಿದ ವಿವಿಧ ವಿನ್ಯಾಸದ ಹಾರಗಳು, ಅಲಂಕಾರಿಕ ಮತ್ತು ಇತರೆ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಆಯೋಜನೆಗೊಂಡಿತ್ತು.
ಬೆಳಗ್ಗೆ 9ರಿಂದ 12ರವರೆಗೆ ತಾರಸಿ, ಕೈತೋಟ ಬಗ್ಗೆ ತೋಟಗಾರಿಕೆ ಉಪ ನಿರ್ದೇಶಕರು ಪ್ರಾತ್ಯಕ್ಷಿಕೆ ಮತ್ತು ತರಬೇತಿ ನೀಡಿದರು. ಉದ್ಯಾನದ ಆವರಣದಲ್ಲಿ ದಿಲನರ್ಸರಿ ಮೆನ್ ಕೋಆಪರೇಟಿವ್ಸೊ ಟೈಟಿಯಿಂದ ವಿವಿಧ ಅಲಂಕಾರಿಕ ಗಿಡಗಳು ಮತ್ತು ಉದ್ಯಾನ ಸಲಕರಣೆ ಮಾರಾಟ ಕಾರ್ಯಕ್ರಮ ಉಪಯುಕ್ತವಾಗಿತ್ತು. ಉದ್ಯಾನದ ಸಂಧ್ಯಾರಾಗದಲ್ಲಿ ಕುಮಾರ್ ಎಚ್.ಎಸ್ ಮತ್ತು ತಂಡದಿಂದ ಜನಪದ, ಭಕ್ತಿಗೀತೆ ಮತ್ತು ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಕಬ್ಬನ್ ಉದ್ಯಾನದಲ್ಲಿ ಗೋಗ್ರೀನ್ ಸಂಸ್ಥೆಯಿಂದ ನಡೆದ ಮಧುಮೇಹ ಜಾಗೃತಿ ಸೈಕಲ್ ಜಾಥಾ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT