ನಟ ಹುಚ್ಚ ವೆಂಕಟ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಜೈಲು ಕಂಬಿಗೆ ತಲೆಚಚ್ಚಿಕೊಂಡ ಹುಚ್ಚ ವೆಂಕಟ್; ತಲೆಗೆ ಗಾಯ

ಬಿಗ್ ಬಾಸ್ ಮನೆಯಿಂದ ಹೊರಬಂದು ಜೈಲಿನಲ್ಲಿರುವ ನಟ ಹುಟ್ಟ ವೆಂಕಟ್ ಅವರು ಸೋಮವಾರ ಬೆಳಗ್ಗೆ ಜೈಲಿನ ಕಂಬಿಗೆ ತಲೆಚಚ್ಚಿಕೊಂಡಿದ್ದರಿಂದಾಗಿ ತೀವ್ರ ರಕ್ತಸ್ರಾವವಾಗಿದ್ದು...

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರಬಂದು ಜೈಲಿನಲ್ಲಿರುವ ನಟ ಹುಟ್ಟ ವೆಂಕಟ್ ಅವರು ಸೋಮವಾರ ಬೆಳಗ್ಗೆ ಜೈಲಿನ ಕಂಬಿಗೆ ತಲೆಚಚ್ಚಿಕೊಂಡಿದ್ದರಿಂದಾಗಿ ತೀವ್ರ ರಕ್ತಸ್ರಾವವಾಗಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಬಂಧನಕ್ಕೊಳಗಾಗಿದ್ದ ಹುಚ್ಚ ವೆಂಕಟ್ ಅವರಿಗೆ ಬೆಂಗಳೂರಿನ 17ನೇ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನಿಗೆ ಶ್ಯೂರಿಟಿ ನೀಡಲು ಯಾರೊಬ್ಬರು ಮುಂದೆ ಬಂದಿರಲಿಲ್ಲ. ಹೀಗಾಗಿ ಜಾಮೀನು ಮಂಜೂರಾಗಿ 5 ದಿನಗಳು ಕಳೆದರೂ ವೆಂಕಟ್ ಬಂಧನದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ.

ಈ ಕಾರಣದಿಂದ ತೀವ್ರವಾಗಿ ಕೆಂಡಾಮಂಡಲವಾಗಿದ್ದ ಹುಚ್ಚ ವೆಂಕಟ್ ಅವರು ಕಳೆದ ರಾತ್ರಿಯಿಂದಲೇ ಜೈಲಿನ ಕೊಠಡಿಯೊಳಗೆ ಕೂಗಾಡಲಾರಂಭಿಸಿದ್ದರು. ಇಂದು ಬೆಳಿಗ್ಗೆ ಕೂಡ ಕೂಗಾಟ ಆರಂಭಿಸಿದ್ದ ಅವರು ಜೈಲಿನ ಗೋಡೆ ಹಾಗೂ ಕಂಬಿಗಳಿಗೆ ತಲೆ ಚಚ್ಚಿಕೊಂಡಿದ್ದಾರೆ ಇದರ ಪರಿಣಾಮ ವೆಂಕಟ್ ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿ ರಕ್ತಸ್ರಾವ ಉಂಟಾಗಿದೆ. ಕೂಡಲೇ ಅಧಿಕಾರಿಗಳು ವೆಂಕಟ್ ಅವರನ್ನು ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆಂದು ತಿಳಿದುಬಂದಿದೆ.

ಖಾಸಗಿ ಟಿವಿ ಚಾನೆಲ್ ವೊಂದರಲ್ಲಿ ಪಾಲ್ಗೊಂಡಿದ್ದ ಹುಚ್ಚ ವೆಂಕಟ್ ಅವರು ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವೆಂಕಟ್ ಅವರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದರು. ಬಳಿಕ ನ್ಯಾಯಾಲಯವು ವೆಂಕಟ್ ಅವರಿಗೆ ನ್ಯಾಯಾಗಂ ಬಂಧನ ವಿಧಿಸಿತ್ತು. ನ.25ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಹುಚ್ಚ ವೆಂಕಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT