ಬಿ.ಜಿ.ಬಣಕಾರ್ ಮತ್ತು ಡಾ.ಹೋ.ಶ್ರೀನಿವಾಸಯ್ಯ 
ಜಿಲ್ಲಾ ಸುದ್ದಿ

ರಾಜ್ಯ ಒಡೆಯುವವರಿಗೆ ಬುದ್ಧಿ ಹೇಳಿ

ಕರ್ನಾಟಕವನ್ನು ಒಡೆಯುವ ಮಾತುಗಳು ಇಂದು ಹೆಚ್ಚಾಗಿ ಕೇಳಿ ಬರುತ್ತಿದ್ದು, ನಾವು ಅದಕ್ಕೆ ಅವಕಾಶ ಕಲ್ಪಿಸಬಾರದು. ಬದಲಾಗಿ...

ಬೆಂಗಳೂರು: ಕರ್ನಾಟಕವನ್ನು ಒಡೆಯುವ ಮಾತುಗಳು ಇಂದು ಹೆಚ್ಚಾಗಿ ಕೇಳಿ ಬರುತ್ತಿದ್ದು, ನಾವು ಅದಕ್ಕೆ ಅವಕಾಶ ಕಲ್ಪಿಸಬಾರದು. ಬದಲಾಗಿ ಅಂತಹವರಿಗೆ ಬುದ್ದಿ ಹೇಳಬೇಕು ಎಂದು ಮಾಜಿ ಸಚಿವ ಬಿ.ಜಿ.ಬಣಕಾರ್ ಹೇಳಿದರು. ಭಾನುವಾರ ಗಾಂಧಿಭವನದಲ್ಲಿ ನಡೆದ ಹುತಾತ್ಮ ಮಹಾದೇವಪ್ಪ ಮೈಲಾರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿ ದ ಅವರು, ಮೈಸೂರು, ಮುಂಬಯಿ,ಹೈದರಾಬಾದ್ ಸೇರಿದಂತೆ ವಿವಿಧ ಪ್ರಾಂತ್ಯಗಳು ಒಟ್ಟಾಗಿ ಸೇರಿ ಕನ್ನಡ ನಾಡಾಗಿದೆ. ಅದನ್ನು ಒಡೆಯುವ ಯತ್ನ ಯಾರಿಂದಲೂ ಆಗಬಾರದು. ಕರ್ನಾಟಕ ರಾಜ್ಯ ಏಕೀಕರಣವಾಗಲು ಸಾಕಷ್ಟು ಜನರ ಪರಿಶ್ರಮವಿದೆ. ಅಂತಹ ವ್ಯಕ್ತಿಗಳ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದರು. ಯುವಕರು ಸಮಾಜದ ಭ್ರಷ್ಟಾಚಾರ ಹಾಗೂ ರಾಜ್ಯವನ್ನು ಒಡೆಯಲು ಮುಂದಾಗುವವರ ವಿರುದ್ಧ ಹೋರಾಡಲು ಮುಂದಾಗಬೇಕು. ಸ್ವಾತಂತ್ರ್ಯದ ನಿಜವಾದ ಆದರ್ಶಗಳನ್ನು ಈಡೇರಿಸಿ, ಉತ್ತಮ ಆಡಳಿತ ಪಡೆಯಲು ಹೋರಾಡ ಬೇಕು. ಸ್ವಾತಂತ್ರ್ಯದ ನಿಜವಾದ ಫಲ ಲಭ್ಯವಾಗುತ್ತಿಲ್ಲ. ಸ್ವಾತಂತ್ರ್ಯದ ಸದ್ಬಳಕೆ ಅವಶ್ಯ. ಈ ಸ್ವಾತಂತ್ರ್ಯ ತಂದುಕೊಟ್ಟಿರುವ ಗಾಂಧೀಜಿ ಅವರ ಜೀವನಾದರ್ಶ ನಮಗೆಲ್ಲ ಮಾದರಿಯಾಗಲಿ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೋ.ಶ್ರೀನಿವಾಸಯ್ಯ ಮಾತನಾಡಿ, ಇಂದಿನ ಮಕ್ಕಳು ಶಿಕ್ಷಿತರಾ ಗುತ್ತಿದ್ದಾರೆ. ಆದರೆ ಗುಣವಂತರಾಗು ತ್ತಿಲ್ಲ. ಹೆಚ್ಚು ಅಂಕಗಳನ್ನು ಪಡೆದು ಸಾಕ್ಷರರಾಗುತ್ತಿದ್ದಾರೆಯೇ ಹೊರತು ಶಿಕ್ಷಿತರಾಗುತ್ತಿಲ್ಲ. ಜಾಗತೀಕರಣದ ಕಾಲದಲ್ಲಿ ಯುವಕರು ಸಮಾಜದಿಂದ ದೂರವಾಗುತ್ತಿದ್ದಾರೆ ಎಂಬುದು ಆತಂಕ ಕಾರಿ ವಿಚಾರ. ಇದರಿಂದ ಸಣ್ಣ ವಿಚಾರ ಗಳಿಗೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಾಧ್ಯಾಪಕಿ ಡಾ.ಲೀಲಾ ಅಪ್ಪಾಜಿ ಮಾತನಾಡಿ, ನೋಬಲ್ ವ್ಯಕ್ತಿತ್ವ ಗಾಂಧೀಜಿಯವರೊಳಗೆ ಅಂತರ್ಗತವಾಗಿದ್ದು, ಅವರಿಗೆ ಯಾವುದೇ ನೋಬಲ್ ಪ್ರಶಸ್ತಿಯ ಅವಶ್ಯಕತೆಯಿಲ್ಲ. ನೋಬಲ್ ಪ್ರಶಸ್ತಿಗಾಗಿ ಗಾಂಧೀಜಿ ಯವರ ಹೆಸರನ್ನು ಹಲವು ಬಾರಿ ಶಿಫಾರಸು ಮಾಡಿದರೂ, ಗಾಂಧೀ ಯವರಿಗೆ ನೋಬಲ್ ಪ್ರಶಸ್ತಿ ನಿರಾ ಕರಿಸಲಾಗಿದೆ. ವಿಪರ್ಯಾಸವೆಂದರೆ ಪ್ರತಿ ವರ್ಷ ಶಾಂತಿ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದವರು ಗಾಂಧೀಜಿಯವರನ್ನು ಸ್ಮರಿಸುತ್ತಾರೆ. ಗಾಂಧಿಯಂಥ ಸಾಧಕರಿಗೆ ನೋಬಲ್ ನೀಡುವುದರಿಂದ ಆ ಪ್ರಶಸ್ತಿಯ ಗರಿ ಹೆಚ್ಚುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮಹಾದೇವಪ್ಪ ಮೈಲಾರ ಜೀವನ ಚರಿತ್ರೆ ಲೋಕಾರ್ಪಣೆಗೊಳಿಸಲಾಯಿತು. ಮಹಾದೇವಪ್ಪ ಮೈಲಾರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಅಧ್ಯಕ್ಷ ಎಚ್.ಎಸ್.ಮಹಾದೇವ್, ವೈದ್ಯೆ, ಮಹಾದೇವಪ್ಪ ಮೈಲಾರ ಅವರ ಪುತ್ರಿ ಕಸ್ತೂರಿ ದೇವಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT