ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹದಾಯಿ: ಮಧ್ಯಂತರ ಅರ್ಜಿ ಸಲ್ಲಿಕೆಗೆ ರಾಜ್ಯ ಸಿದ್ಧತೆ

ಮಹದಾಯಿ ಜಲ ವಿವಾದ ಸಂಬಂಧ ಮಂಗಳವಾರದೊಳಗಾಗಿ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು...

ಬೆಂಗಳೂರು: ಮಹದಾಯಿ ಜಲ ವಿವಾದ ಸಂಬಂಧ ಮಂಗಳವಾರದೊಳಗಾಗಿ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ. 
ವಿಧಾನ ಮಂಡಲ ಅಧಿವೇಶನದ ಕೊನೆ ದಿನ ಇನ್ನು ಮೂರು ದಿನಗಳೊಳಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬರದ ಸಿದ್ಧತೆ ನಡೆಸಿದ ಜಲಂಪನ್ಮೂಲ ಹಾಗೂ ಕಾನೂನು ಇಲಾಖೆ ಅಧಿಕಾರಿಗಳು ಅರ್ಜಿಯ ಕರಡನ್ನು ಸಿದ್ದಪಡಿಸಿ ರಾಜ್ಯದ ಪರ ವಕೀಲ ಪಾಲಿ ಎಸ್.ನಾರೀಮನ್ ಅವರ ಒಪ್ಪಿಗೆ ಪಡೆದುಕೊಂಡಿದ್ದಾರೆ. 
ಒಟ್ಟು 7 ಟಿಎಂಸಿ ನೀರಿಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಸೋಮವಾರವೇ ಈ ಪ್ರಕ್ರಿಯೆಗೆ ಚಾಲನೆ ದೊರೆಯುತ್ತದೆ. ಒಂದು ವೇಳೆ ಸೋಮವಾರ ಸಾಧ್ಯವಾಗದೇ ಇದ್ದರೆ ಮಂಗಳವಾರವಂತೂ ಅರ್ಜಿ ಸಲ್ಲಿಕೆಯಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT