ಆರೋಗ್ಯ ಸಚಿವ ಯು.ಟಿ. ಖಾದರ್ 
ಜಿಲ್ಲಾ ಸುದ್ದಿ

ಮಕ್ಕಳು, ಬಾಣಂತಿಯರ ಸಾವು ತಡೆಗೆ ಕ್ರಮ

ಬಳ್ಳಾರಿಯ ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ವಿಮ್ಸ್), ಬೆಂಗಳೂರಿನ ವಾಣಿವಿಲಾಸ, ಮೈಸೂರಿನ ಚೆಲುವಾಂಬ ಸೇರಿದಂತೆ ರಾಜ್ಯದ ಇತರೆ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಹಾಗೂ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ...

ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ವಿಮ್ಸ್), ಬೆಂಗಳೂರಿನ ವಾಣಿವಿಲಾಸ, ಮೈಸೂರಿನ ಚೆಲುವಾಂಬ ಸೇರಿದಂತೆ ರಾಜ್ಯದ ಇತರೆ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಹಾಗೂ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಅದರ ನಿಯಂತ್ರಣ ಹಾಗೂ ಅಧ್ಯಯನಕ್ಕಾಗಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಆದಷ್ಟು ಬೇಗ ಸಭೆ ಕರೆದು ರೂಪು ರೇಷೆ ಸಿದ್ದಪಡಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

`ಮಕ್ಕಳು ಹಾಗೂ ಬಾಣಂತಿಯರ ಸಾವಿನ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಸರ್ಕಾರಿ ಹಿರಿಯ ವೈದ್ಯಾಧಿಕಾರಿಗಳು, ಖಾಸಗಿ ವೈದ್ಯರು ಹಾಗೂ ಸರ್ಕಾರೇತರ ಸಂಸ್ಥೆ (ಎನ್ ಜಿಓ) ಒಳಗೊಂಡಂತೆ ಸಮಿತಿ ರಚಿಸಲು ಉದ್ದೇಶಿಸಲಾಗಿದೆ. ಸಮಿತಿ ಪ್ರತಿ ತಿಂಗಳು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಲಿದೆ.

ಆಸ್ಪತ್ರೆಗಳಲ್ಲಿ ಹೆರಿಗೆಗಾಗಿ ಇರುವ ವ್ಯವಸ್ಥೆಗಳು, ಅನಾರೋಗ್ಯಕ್ಕೆ ತುತ್ತಾಗಿರುವ ಮಕ್ಕಳಿಗಾಗಿ ಇರುವ ಎನ್ ಐಸಿಯು (ನವಜಾತ ಶಿಶುಗಳ ತೀವ್ರ ನಿಗಾ ಘಟಕ) ಸೇರಿದಂತೆ ಇತರ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಸೌಲಭ್ಯಗಳ ಕೊರತೆ, ಸಿಬ್ಬಂದಿ ಕೊರತೆ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪಟ್ಟಿ ಮಾಡಲಿದೆ. ಬಳಿಕ ಅದರನ್ನು ಬಗೆಹರಸಲು ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ