ಜಿಲ್ಲಾ ಸುದ್ದಿ

ಕೊಲೆ ಯತ್ನ ಪ್ರಕರಣ: ನಟ ವಿನೋದ್ ಆಳ್ವಾಗೆ ಜಾಮೀನು

Lingaraj Badiger

ಮಂಗಳೂರು: ಕೊಲೆಗೆ ಸಂಚು ಹಾಗೂ ಕೊಲೆ ಯತ್ನ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಬಹುಭಾಷಾ ನಟ ವಿನೋದ್ ಆಳ್ವಾ ಅವರಿಗೆ ಮಂಗಳವಾರ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ 14 ದಿನಗಳಿಂದ ಜೈಲಿನಲ್ಲಿದ್ದ ಆಳ್ವಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಜಾಮೀನು ನೀಡಿದೆ.

ಆಳ್ವ ಅವರ ಮ್ಯಾನೇಜರ್ ಆಗಿದ್ದ ಸಚ್ಚಿದಾನಂದ್ ಅವರು ವಿನೋದ್ ಆಳ್ವ ಅವರು ತಮ್ಮ ಕೊಲೆಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸಂಪ್ಯಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿನೋದ್ ಅವರನ್ನು ನವೆಂಬರ್ 16ರಂದು ಪೊಲೀಸರು ಬಂಧಿಸಿದ್ದರು.

SCROLL FOR NEXT