ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಕಬ್ಬನ್ ಪಾರ್ಕ್ ಕೆಜಿಎಸ್ ಕ್ಲಬ್‍ನಲ್ಲಿ ಸೋಮವಾರ ಆಯೋಜಿಸಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರು 
ಜಿಲ್ಲಾ ಸುದ್ದಿ

ವಂಚಿತ ಸಮುದಾಯಗಳ ಸಂಘಟನೆ ಅನಿವಾರ್ಯ

ದುರ್ಬಲ ಸಮುದಾಯಗಳು ಆಡಳಿತದ ಚುಕ್ಕಾಣಿ ಹಿಡಿದಾಗ ಬಲಿಷ್ಠ ಸಮುದಾಯಗಳು ಸಹಿಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ `ಜಾತಿ ರಾಜಕಾರಣ' ಆರಂಭವಾಗುತ್ತದೆ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು...

ಬೆಂಗಳೂರು: ದುರ್ಬಲ ಸಮುದಾಯಗಳು ಆಡಳಿತದ ಚುಕ್ಕಾಣಿ ಹಿಡಿದಾಗ ಬಲಿಷ್ಠ ಸಮುದಾಯಗಳು ಸಹಿಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ `ಜಾತಿ ರಾಜಕಾರಣ' ಆರಂಭವಾಗುತ್ತದೆ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.

ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಕಬ್ಬನ್ ಪಾರ್ಕ್ ಕೆಜಿಎಸ್ ಕ್ಲಬ್‍ನಲ್ಲಿ ಸೋಮವಾರ ಆಯೋಜಿಸಿದ್ದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಅವರು
ಮಾತನಾಡಿದರು. ಆಡಳಿತ ವ್ಯವಸ್ಥೆ ದುರ್ಬಲರ ಕೈಗೆ ಬಂದಾಗ ಬಲಿಷ್ಠರು ಸಹಿಸುವುದಿಲ್ಲ. ನಮ್ಮ ರಾಜ್ಯದ ರಾಜಕಾರಣ ಸಹ ಇದರಿಂದ ಹೊರತಾಗಿಲ್ಲ. ಡಿ.ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ ಅಧಿಕಾರದಲ್ಲಿದ್ದಾಗಲೂ ಜಾತಿ ರಾಜಕೀಯ ಕೆಲಸ ಮಾಡಿತು. ಬಲಿಷ್ಠರನ್ನು ಎದುರಿಸಬೇಕಾದರೆ ವಂಚಿತ ಸಮುದಾಯದ ಜನಪತ್ರಿನಿಧಿಗಳು
ಒಗ್ಗೂಡುವುದು ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿ ಸಂಘಟನೆಗಳು ಇರಬಾರದು. ಆದರೆ, ಬಲಿಷ್ಠ ಸಮುದಾಯಗಳ ರಾಜಕೀಯ ಹಿತಾಸಕ್ತಿ ಎದುರು ತಮ್ಮ ಅಸ್ಥಿತ್ವ ಕಾಪಾಡಿಕೊಳ್ಳಲು ದುರ್ಬಲ ಅಥವಾ ವಂಚಿತ ಸಮುದಾಯಗಳ ಸಂಘಟನೆ ಅತ್ಯಗತ್ಯ. ಈ ದೇಶದಲ್ಲಿ ಹಿಂಸೆಯಿಂದ ಅಹಿಂಸೆಯತ್ತ ತಿರುಗಿದವರಲ್ಲಿ ಸಾಮಾ್ರಟ ಅಶೋಕ ಮತ್ತು ಕನಕದಾಸರು ಪ್ರಮುಖರಾಗಿ ಕಾಣುತ್ತಾರೆ. ಕಳಿಂಗ ಯುದ್ಧದಿಂದ ಮನನೊಂದ ಅಶೋಕ ಬೌದ್ಧ ಧರ್ಮ ಸ್ವೀಕರಿಸಿ ಜಗತ್ತಿನಾದ್ಯಂತ ಪ್ರಚಾರ ಮಾಡಿದ. ಅಂತೆಯೇ ರಾಜ್ಯದಲ್ಲಿ ಕನಕದಾಸರು ಭಕ್ತಿಯತ್ತ ವಾಲಿ ಸಾಮಾಜಿಕ ಅನಿಷ್ಠ ಪದ್ಧತಿಗಳ ನಿವಾರಣೆಗೆ ಹೋರಾಡಿದರು. ಅವರ ರಾಮಧ್ಯಾನ್ಯ ಚರಿತೆ ಜಾಗತಿಕ ಸಾಹಿತ್ಯದಲ್ಲಿ ಅದ್ಬುತ ರೂಪಕ ಕಾವ್ಯ ಎಂದು ಬಣ್ಣಿಸಿದರು.

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆ ವಿರುದ್ಧ ತಮ್ಮ ಸಾತ್ವಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಅವರ ನಳಚರಿತ್ರೆ ಸ್ತ್ರೀ ಲೋಕದ ಒಳ ತುಮುಲಗಳ ತೆರೆದಿಟ್ಟಿದೆ. ಈ ಕಾರಣಕ್ಕಾಗಿಯೇ ಅವರ ಕೃತಿಗಳು ಇಂದಿಗೂ ಸಾಂಸ್ಕೃತಿಕ ಲೋಕದಲ್ಲಿ ಚರ್ಚೆಯಾಗುತ್ತಿವೆ. ಹೀಗಾಗಿ ಕನಕದಾಸರು ಬುದ್ಧ, ಬಸವಣ್ಣನಂತೆ ವಿಶ್ವ ಮಾನವರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ ಹೊಸದುರ್ಗಾ ಶಾಖಾ ಮಠದಈಶ್ವರಾನಂದಪುರಿ ಮಹಾಸ್ವಾಮೀಜಿ ಸಾನಿಧ್ಯ  ವಹಿಸಿದ್ದರು. ಜಲಸಂಪನ್ಮೂಲ ಇಲಾಖೆ ಉಪ ಕಾರ್ಯದರ್ಶಿ ಎಸ್.ರೇಣುಕಾರಾದ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಾಮಚಂದ್ರಪ್ಪ, ರಾಜ್ಯ ನೌಕರರ ಮತ್ತು ಕಾರ್ಮಿಕರ ಕೇಂದ್ರ ಕನಕ ಸಮಿತಿ ಅಧ್ಯಕ್ಷ ಎಚ್. ಗೋಪಾಲಕೃಷ್ಣಸ್ವಾಮಿ, ಕನ್ನಡ ವಿವಿ ಕುಲಪತಿ ಡಾ.ಮಲ್ಲಿಕಾ ಘಂಟಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಸಾಧಕರಾದ ನಾಗಣ್ಣ, ಮುತ್ತಣ್ಣ ಪೂಜಾರ, ಎಚ್.ಎಸ್.ಪಾಟೀಲ, ಕೆಂಚಮಾದೇಗೌಡ, ಡಾ.ಆರ್.ಹರ್ಷ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT