ಎಂಎಂ ಕಲಬುರ್ಗಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಲಬುರ್ಗಿ ಕುಟುಂಬಕ್ಕೆ ಆರೆಸ್ಸೆಸ್‍ನಿಂದ ಶ್ರದ್ಧಾಂಜಲಿ ಪತ್ರ

ಜಾರ್ಖಂಡ್‍ನ ರಾಂಚಿಯಲ್ಲಿ ಇತ್ತೀಚೆಗೆ ನಡೆದ ಆರ್‍ಎಸ್‍ಎಸ್ ಸಮಾವೇಶದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಸಲ್ಲಿಸಿದ ಶ್ರದ್ಧಾಂಜಲಿ ಪತ್ರವನ್ನು ಕಲಬುರ್ಗಿ ಅವರ ಪತ್ನಿ ಉಮಾದೇವಿ ಅವರಿಗೆ ಆರ್‍ಎಸ್‍ಎಸ್ ಪ್ರಮುಖ ಶ್ರೀಧರ ನಾಡಿಗೇರ ಸೋಮವಾರ ನೀಡಿದ್ದಾರೆ...

ಧಾರವಾಡ: ಜಾರ್ಖಂಡ್‍ನ ರಾಂಚಿಯಲ್ಲಿ ಇತ್ತೀಚೆಗೆ ನಡೆದ ಆರ್‍ಎಸ್‍ಎಸ್ ಸಮಾವೇಶದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಸಲ್ಲಿಸಿದ ಶ್ರದ್ಧಾಂಜಲಿ ಪತ್ರವನ್ನು ಕಲಬುರ್ಗಿ ಅವರ ಪತ್ನಿ  ಉಮಾದೇವಿ ಅವರಿಗೆ ಆರ್‍ಎಸ್‍ಎಸ್ ಪ್ರಮುಖ ಶ್ರೀಧರ ನಾಡಿಗೇರ ಸೋಮವಾರ ನೀಡಿದ್ದಾರೆ.

ಸಮಾವೇಶದಲ್ಲಿ ಡಾ. ಕಲಬುರ್ಗಿ ಅವರ ಹತ್ಯೆ ಖಂಡಿಸಿ ಶ್ರದ್ಧಾಂಜಲಿ ಸಲ್ಲಿಸಿ, ಮೌನಾಚರಣೆ ಮಾಡಲಾಗಿತ್ತು. ಆಗ ಕುಟುಂಬದವರಿಗೆ ಸಾಂತ್ವನದ ಪತ್ರ ಸಿದಟಛಿಪಡಿಸಲಾಗಿತ್ತು. ಇದೀಗ ಕಲಬುರ್ಗಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಾಯಿತು. ಹತ್ಯೆಗೆ ಸಂಬಂಧಿಸಿ ಸಂಘದ ಮೇಲಿನ ಆರೋಪ ಅಸಮಂಜಸ. ಯಾವುದೇ ಆಧಾರಗಳಿಲ್ಲದೇ ಸಂಘಟನೆಪೊದನ್ನು ಈ ರೀತಿ ಆರೋಪ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ. ಆದಷ್ಟು ಬೇಗ ಕಲಬುರ್ಗಿ ಹಂತಕರನ್ನು ರಾಜ್ಯ ಸರ್ಕಾರ ಬಂಧಿಸಲಿ ಎಂಬುದು ನಮ್ಮ ಆಗ್ರಹ ಎಂದು ಶ್ರೀಧರ ನಾಡಿಗೇರ ಸುದ್ದಿಗಾರರಿಗೆ  ತಿಳಿಸಿದ್ದಾರೆ.

ಈ ವೇಳೆ ಇಷ್ಟು ತಡವಾಗಿ ಶ್ರದ್ಧಾಂಜಲಿ ಪತ್ರ ನೀಡಿದ್ದೇಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ರೀಧರ ನಾಡಿಗೇರ, ತಮಗೆ ಶ್ರದ್ಧಾಂಜಲಿ ಪತ್ರ ತಡವಾಗಿ ಸಿಕ್ಕಿತು. ಹಾಗಾಗಿ ಅವರಿಗೆ ಆ  ಒಪ್ಪಿಸುವುದು ವಿಳಂಬವಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT