ಕೆ.ಜೆ. ಜಾರ್ಜ್ 
ಜಿಲ್ಲಾ ಸುದ್ದಿ

ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ ಜಾರಿ: ಜಾರ್ಜ್

ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ವೃತ್ತಿಪರ...

ಬೆಂಗಳೂರು: ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ವೃತ್ತಿಪರ ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲು ಚಿಂತನೆ ನಡೆಸಿದೆ.

ಪದೇಪದೆ ಸರಗಳ್ಳತನ ಮಾಡಿ ಸಿಕ್ಕಿಹಾಕಿಕೊಳ್ಳುವ ವೃತ್ತಿಪರ ಕಳ್ಳರ ವಿರುದ್ಧ ಗೂಂಡಾ ಕಾಯ್ಕೆ ಬಳಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರಗಳ್ಳರ ವಿರುದ್ಧದ ಕಾನೂನು ಅಷ್ಟೇನು ಪ್ರಬಲವಾಗಿಲ್ಲ. ಹೀಗಾಗಿ ಅವರಿಗೆ ಬೇಗ ಜಾಮೀನು ಸಿಗುತ್ತದೆ. ಪೊಲೀಸರು ಎಷ್ಟೇ ಕ್ರಮ ತೆಗೆದುಕೊಂಡರು ಕಳ್ಳರು ಜಾಮೀನು ಪಡೆದು ಮತ್ತೆ ಕಳ್ಳತನ ಮಾಡುತ್ತಾರೆ. ಹೀಗಾಗಿ ಕಾನೂನು ಬಲಪಡಿಸುವ ಅಗತ್ಯ ಇದೆ ಎಂದರು.

ಸರಗಳ್ಳರ ವಿರುದ್ಧ ಕಠಿಣ ಕಾನೂನು ರೂಪಿಸಲು ವಿಧಾನ ಮಂಡಲದಲ್ಲಿ ಚರ್ಚಿಸಿ ಕಾನೂನು ಬಲಗೊಳಿಸಬೇಕಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT