ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುತ್ತಿರುವ ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಗಾಂಧಿ ವಿಚಾರಗಳೇ ಸರ್ಕಾರದ ಸೂತ್ರಗಳು: ಸಿಎಂ

ಭಾರತೀಯ ಸಮಾಜದ ಸ್ಥಿತಿಗತಿಗಳನ್ನು ಸಂಪೂರ್ಣವಾಗಿ ಅರಿತಿದ್ದ ಗಾಂಧೀಜಿ ವಿಚಾರದಾರೆಗಳು ನಮ್ಮ ಸರ್ಕಾರಕ್ಕೆ ಮಾರ್ಗದರ್ಶಿ...

ಬೆಂಗಳೂರು: ಭಾರತೀಯ ಸಮಾಜದ ಸ್ಥಿತಿಗತಿಗಳನ್ನು ಸಂಪೂರ್ಣವಾಗಿ ಅರಿತಿದ್ದ ಗಾಂಧೀಜಿ ವಿಚಾರದಾರೆಗಳು ನಮ್ಮ ಸರ್ಕಾರಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಜಯಂತಿ ಅಂಗವಾಗಿ ಶುಕ್ರವಾರ ಬೆಳಗ್ಗೆ 7.15ಕ್ಕೆ ಅಕಾಶವಾಣಿ, ಬೆಳಗ್ಗೆ 8.30ಕ್ಕೆ ದೂರದರ್ಶನದಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಾಂಧೀಜಿ ಅವರ ಚಿಂತನೆಯ ಬೆಳಕಲ್ಲಿಯೇ ಭಾರತ ನಿರ್ಮಾಣವಾಗಿದೆ.

ಅಸ್ಪೃಶ್ಯತೆ ನಿವಾರಣೆ, ರೈತರ ಏಳಿಗೆ, ಖಾದಿ ಮತ್ತು ಗ್ರಾಮೋದ್ಯೋಗ, ಕಾರ್ಮಿಕರ ಕಲ್ಯಾಣ, ಮಹಿಳೆರ ರಕ್ಷಣೆ , ಶಿಕ್ಷಣ, ಗ್ರಾಮಸ್ವಚ್ಛತೆ, ಆರ್ಥಿಕ ಸಮಾನತೆ, ಸಮುದಾಯದ ಐಕ್ಯತೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಾರ್ವಜನಿಕ ಆರೋಗ್ಯ ಹಾಗೂ ಶಿಕ್ಷಣ ಅವರ ರಚನಾತ್ಮಕ ಕಾರ್ಯಕ್ರಮಗಳು.

ಗಾಂಧೀಜಿ ಕನಸಾಗಿದ್ದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮಗ್ರವಾಗಿ ಮತ್ತು ಸಮರ್ಥವಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದರು. ಗ್ರಾಮಮಟ್ಟದ ಆಡಳಿತ ಸಂಸ್ಥೆಗಳು ಸ್ವಾವಲಂಬಿ ಘಟಕಗಳಾಗುವಂತೆ ಮಾಡಬೇಕು ಎಂದು ಗಾಂಧಿ ಕನಸು ಕಂಡಿದ್ದರು.

ಅವರ ಕನಸು ನನಸು ಮಾಡಲು ಬದ್ಧರಾಗಿದ್ದೇವೆ. ಗ್ರಾಮಗಳ ವಿಕಾಸಕ್ಕಾಗಿ 21 ಅಂಶಗಳ ಹೊಸ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಗ್ರಾಮ ನೈರ್ಮಲ್ಯದ ವಿಷಯದಲ್ಲಿ ರಾಜ್ಯ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಶೌಚಾಲಯ ನಿರ್ಮಾಣದಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT