ರಾಘವೇಶ್ವರ ಭಾರತಿ 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀ ಪ್ರಕರಣ ವಿವರ ಕೇಳಿದ ರಾಜ್ಯಪಾಲ

ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ...

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಈ ಬಗ್ಗೆ ಸುಳಿದಾಡುತ್ತಿದ್ದ ಸುದ್ದಿಯನ್ನು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ದೃಢಪಡಿಸಿದ್ದಾರೆ. ಇದರೊಂದಿಗೆ ರಾಘವೇಶ್ವರ ಶ್ರೀಗಳ ಪ್ರಕರಣದಲ್ಲಿ ರಾಜಭವನದ ಮಧ್ಯಪ್ರವೇಶವೂ ಆದಂತಾಗಿದೆ.

ಆದರೆ ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಘವೇಶ್ವರ ಶ್ರೀಗಳ ಪ್ರಕರಣ ಕುರಿತು ರಾಜ್ಯಪಾಲರು ಸರ್ಕಾರದಿಂದ ಮಾಹಿತಿ ಕೇಳಿದ್ದಾರೆ. ನಾವು ಕೊಡುತ್ತೇವೆ ಎಂದರು.

ಮಾಹಿತಿ ಇಲ್ಲ: ಸಚಿವ ಜಾರ್ಜ್
ರಾಘವೇಶ್ವರ ಶ್ರೀಗಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖಾ ಪ್ರಗತಿ ಬಗ್ಗೆ ವರದಿ ಕೇಳಿರುವ ಬಗ್ಗೆ ಅಧಿಕೃತಕವಾಗಿ ತಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಾಲರಿಂದ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣದ ಬಗ್ಗೆ ರಾಜ್ಯಪಾಲರು ಸಿಎಂ ಜೊತೆ ಚರ್ಚಿಸಿರಬಹುದು. ಪ್ರಕರಣದ ವರದಿ ಕೇಳಿದರೆ ಸರ್ಕಾರ ರಾಜ್ಯ ಪಾಲರಿಗೆ ವರದಿ ಸಲ್ಲಿಸಲಿದೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ