ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಗಾಂಧೀವಾದಿ ಡಾ.ಹೋ.ಶ್ರೀನಿವಾಸಯ್ಯಅವರಿಗೆ `ಗಾಂಧೀ ಸೇವಾ ಪ್ರಶಸ್ತಿ' ಪ್ರದಾನ ಮಾಡಿದರ 
ಜಿಲ್ಲಾ ಸುದ್ದಿ

ಹೋ.ಶ್ರೀನಿವಾಸಯ್ಯಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಗಾಂಧೀಜಿ ಮಾದರಿಯಲ್ಲಿ ಸರಳ ಜೀವನ ನಡೆಸುವುದಕ್ಕೆ ನಮ್ಮಿಂದ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ಗಾಂಧೀಜಿ ಮಾದರಿಯಲ್ಲಿ ಸರಳ ಜೀವನ ನಡೆಸುವುದಕ್ಕೆ ನಮ್ಮಿಂದ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಹಿರಿಯ ಗಾಂಧೀವಾದಿ, ಗಾಂಧೀಭವನದ ಅಧ್ಯಕ್ಷ ಡಾ.ಹೋ.ಶ್ರೀನಿವಾಸಯ್ಯ ಅವರಿಗೆ ಸರ್ಕಾರದಿಂದ ರು.5ಲಕ್ಷ ನಗದು ಮತ್ತು ಫಲತಾಂಬೂಲ ಒಳಗೊಂಡ `ಗಾಂಧಿ ಸೇವಾ ಪ್ರಶಸ್ತಿ' ವಿತರಿಸಿ ಅವರು ಮಾತನಾಡಿದರು. ಗಾಂಧೀಜಿ ಸೇವಿಸುತ್ತಿದ್ದದ್ದು ಊಟ, ಆಡಿನ ಹಾಲು, ಕಡ್ಲೇಕಾಯಿ, ಬೆಲ್ಲ ಮಾತ್ರ. ಅದಕ್ಕಿಂತ ಹೆಚ್ಚು ಆಹಾರ ಅವರು ಸೇವಿಸುತ್ತಿರಲಿಲ್ಲ ಆದ್ದರಿಂದಲೇ ಅವರು ಹೆಚ್ಚು ಕ್ರಿಯಾಶೀಲರಾಗಿದ್ದರು ಎಂದರು.

ಶ್ರೀನಿವಾಸಯ್ಯ ಅವರು `ಗಾಂಧಿ ಸೇವಾ ಪ್ರಶಸ್ತಿ' ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಅವರು ಮತ್ತು ಅವರ ಬೆಂಬಲಿಗರು ಗಾಂಧೀವಾದಿಗಳು ಎಂದು ಹೇಳಿಕೊಳ್ಳಬಹುದು. ಆದರೆ ಎಲ್ಲರೂ ಸುಮ್ಮನೆ ಗಾಂಧಿೀವಾದಿಗಳು ಎಂದುಕೊಳ್ಳುವುದರಲ್ಲಿ ಅರ್ಥವಿಲ ಎಂದು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್. ಕೆ.ಪಾಟೀಲ್ ಮಾತನಾಡಿ, ಗಾಂಧೀಜಿ ಅವರು ಗ್ರಾಮ ಸ್ವರಾಜ್, ಸ್ವಚ್ಛತೆಯ ಕನಸು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ವಿವರಿಸಿದರು. ಪ್ರಶಸ್ತಿ ಸ್ವೀಕರಿಸಿದ ಗಾಂಧೀವಾದಿ ಹೋ.ಶ್ರೀನಿವಾಸಯ್ಯ, ನನಗೆ ಸಿಕ್ಕಿರುವ ಸರ್ಕಾರದ ಈ ಪುರಸ್ಕಾರವನ್ನು ಈ ಸಮಾಜದ ಕೆಲಸಕ್ಕೆ ಅರ್ಪಿಸುವುದಾಗಿ ಪ್ರಕಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT