(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೆಂವಿವಿಯಲ್ಲಿ ಗಾಂಧೀಜಿ ಮತ್ತು ಗ್ರಾಮ ಭಾರತ ಸಂವಾದ

ಗಾಂಧೀಜಿ ಅವರ ಗ್ರಾಮ ಭಾರತ ಚಿಂತನೆಗಳನ್ನು ಅಂಬೇಡ್ಕರ್ ಮತ್ತು ಟ್ಯಾಗೋರ್ ಚಿಂತನೆಗಳ ಜೊತೆಯಲ್ಲಿ ವಿಸ್ತರಿಸಿಕೊಳ್ಳಬೇಕಾಗಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಪ್ರೊ. ಬಿಸಲಯ್ಯ ಹೇಳಿದರು...

ಬೆಂಗಳೂರು: ಗಾಂಧೀಜಿ ಅವರ ಗ್ರಾಮ ಭಾರತ ಚಿಂತನೆಗಳನ್ನು ಅಂಬೇಡ್ಕರ್ ಮತ್ತು ಟ್ಯಾಗೋರ್ ಚಿಂತನೆಗಳ ಜೊತೆಯಲ್ಲಿ ವಿಸ್ತರಿಸಿಕೊಳ್ಳಬೇಕಾಗಿದೆ ಎಂದು ಕೃಷಿ ವಿವಿ ವಿಶ್ರಾಂತ ಕುಲಪತಿ ಪ್ರೊ. ಬಿಸಲಯ್ಯ ಹೇಳಿದರು.

ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ `ಗಾಂಧೀಜಿ ಮತ್ತು ಗ್ರಾಮ ಭಾರತ: ಸಮಕಾಲೀನ ಸಂವಾದ'ದಲ್ಲಿ ಮಾತನಾಡಿ, ಗಾಂಧೀಜಿ ಅವರ ಗುಡಿ ಕೈಗಾರಿಕೆಗಳು ಗ್ರಾಮದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿವೆ. `ಭಾರತವು ನಗರೀಕರಣಕ್ಕೆ ಹೊಂದಿಕೊಳ್ಳಲಾರದು' ಎಂಬ ಗಾಂಧೀಜಿಯವರ ಮಾತು ಇಂದು ನಗರಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿದರೆ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.

ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಸ್. ಆರ್. ಕೇಶವ್, ಗಾಂಧಿ ರೂಪಿಸಿದ ಖಾದಿ ಸಂಸ್ಥೆ ಉಳಿಸಲು ಸರ್ಕಾರ ಖಾದಿ ಗ್ರಾಮೋದ್ಯೋಗ ಮಂಡಳಿಗಳಿಂದ ಸಮವಸ್ತ್ರಗಳನ್ನು ಖರೀದಿಸಬೇಕು. ಎಲ್ಲಾ ಸರ್ಕಾರಿ ನೌಕರರು ವಾರದಲ್ಲಿ ಒಂದು ದಿನ ಖಾದಿ ವಸ್ತ್ರ ತೊಡಬೇಕು ಎಂದು ಹೇಳಿದರು. ಬೆಂವಿವಿ. ಕುಲಪತಿ ಪ್ರೊ.ಬಿ. ತಿಮ್ಮೇಗೌಡ, ಡಾ.ನಟರಾಜ್ ಹುಳಿಯಾರ್ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT