ಮಹಾತ್ಮ ಗಾಂಧೀಜಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಂಸ್ಕೃತಿಜನ್ಯ ರಾಜಕಾರಣ ಹುಟ್ಟುಹಾಕಿದ್ದು ಗಾಂಧಿ

ಮಹಾತ್ಮ ಗಾಂಧೀಜಿ ತಮ್ಮ ಅರಿವಿಗೆ ಬಂದ ಎಲ್ಲವನ್ನು ಒಂದಕ್ಕೊಂದು ಬೆಸೆದು ನೋಡುವ ಸಮಗ್ರದ ದೃಷ್ಟಿಕೋನ ಹೊಂದಿದ್ದರು ಎಂದು ರಂಗಾಯಣ ಮಾಜಿ ನಿರ್ದೇಶಕ ಪ್ರಸನ್ನ ಅಭಿಪ್ರಾಯ ಪಟ್ಟರು...

ಬೆಂಗಳೂರು: ಮಹಾತ್ಮ ಗಾಂಧೀಜಿ ತಮ್ಮ ಅರಿವಿಗೆ ಬಂದ ಎಲ್ಲವನ್ನು ಒಂದಕ್ಕೊಂದು ಬೆಸೆದು ನೋಡುವ ಸಮಗ್ರದ ದೃಷ್ಟಿಕೋನ ಹೊಂದಿದ್ದರು ಎಂದು ರಂಗಾಯಣ ಮಾಜಿ ನಿರ್ದೇಶಕ ಪ್ರಸನ್ನ ಅಭಿಪ್ರಾಯ ಪಟ್ಟರು.

ಸಮುದಾಯ ರಂಗತಂಡವು ಮಹಾತ್ಮ ಗಾಂಧಿ ಭಾರತಕ್ಕೆ ಬಂದು ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಏರ್ಪಡಿಸಿದ್ದ `ನಿರಂತರ ಗಾಂಧಿ ಒಂದು ಮುಕ್ತ ಚರ್ಚೆ'ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅವರ ಸಂತನ ಮೌನವನ್ನು ಪ್ರಗತಿಪರರು ಮೌಢ್ಯವೆಂದು ಬಿಂಬಿಸುತ್ತಿದ್ದದ್ದು ಸರಿಯಲ್ಲ. ಸಂವೇದನದ ಪರಿಧಿಗೆ ಬಂದ ವಿಷಯಗಳನ್ನು ಓರೆಗೆ ಹಚ್ಚಿ ನೋಡುತ್ತಿದ್ದ ಅವರು ಓರ್ವ ಸಂತ ಹಾಗೂ ಮೊದಲ ರಾಜಕಾರಣಿ ಎಂಬುದಾಗಿ ವಿಶ್ಲೇಷಿಸಬಹುದು. ಒಂದು ಮಾತನಿಂದ ಇಡೀ ಸಮುದಾಯವನ್ನು ಒಗ್ಗೂಡಿಸುವ ಸಂಸ್ಕೃತಿ ಜನ್ಯ ರಾಜಕಾರಣ ಹುಟ್ಟುಹಾಕಿದರು ಎಂದು ತಿಳಿಸಿದರು.


ಪ್ರಸ್ತುತ ಸಮಾಜದಲ್ಲಿ ಹದಗೆಟ್ಟಿರುವ ವಾತಾವರಣವನ್ನು ನಾವು ನೋಡುತ್ತಿದ್ದೇವೆ. ಅನುಭವಜನ್ಯ ಮತ್ತು ಸಂಸ್ಕೃತಿ ಜನ್ಯ ರಾಜಕಾರಣ ಮಾಡಬೇಕಾದ ತುರ್ತು ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ. ಕೇಂದ್ರೀಕೃತ ವ್ಯವಸ್ಥೆಗೆ ವಿರುದ್ಧವಾಗಿದ್ದ ಗಾಂಧಿ, ಎಲ್ಲೆಡೆ ಆಡಳಿತ ಸಿಗಬೇಕೆಂಬ ಮಹಾದಾಸೆ ಹೊಂದಿದ್ದರು ಎಂದರು.

ನಾಟಕಕಾರ ಮುಕುಂದ ರಾವ್, ಪೃಥ್ವಿದತ್ತ ಚಂದ್ರಶೋಭಿ, ಅಗ್ರಹಾರ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT