ಕಾಂಗ್ರೆಸ್(ಕಚೇರಿ) 
ಜಿಲ್ಲಾ ಸುದ್ದಿ

ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರು

ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ನಡೆದ ಕೆಪಿಸಿಸಿ ಬಿಲ್ಡಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಈಗಿರುವ ಕೆಪಿಸಿಸಿ ಕಚೇರಿ ಹಿಂಭಾಗದ ಜಾಗದಲ್ಲಿ ನಾಲ್ಕು ಅಂತಸ್ತಿನ ಕೆಪಿಸಿಸಿ ಭವನ ನಿರ್ಮಿಸಲಾಗುತ್ತಿದೆ. ಸುಮಾರು 20 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಕಟ್ಟಡಕ್ಕೆ ಕಾಂಗ್ರೆಸ್ ನ ಎಲ್ಲಾ ಸಂಸದರು, ಶಾಸಕರು, ಸಚಿವರು ಮಾಜಿ ಶಾಸಕ, ಸಂಸದ, ಸಚಿವರು ಆರ್ಥಿಕ ನೆರವು ನೀಡುವಂತೆ ಡಾ.ಜಿ ಪರಮೇಶ್ವರ್ ಅವರು ಪತ್ರ ಬರೆದಿದ್ದರು.
ನೀವೆಲ್ಲರೂ ಈ ಮಟ್ಟಕ್ಕೆ ಬೆಳೆಯಲು ಪಕ್ಷವೇ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೆ ದೇಗುಲವಿದ್ದಂತೆ. ಹೀಗಾಗಿ ಪಕ್ಷದ ಕಟ್ಟಡ ನಿರ್ಮಾಣಕ್ಕೆ ಉದಾರ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು. ಸಚಿವರು ಮತ್ತು ಸಂಸದರು ರೂ 5 ಲಕ್ಷ ಹಾಗೂ ಶಾಸಕರು 2 ಲಕ್ಷ ನೆರವು ನೀಡುವಂತೆ ಪ್ರತಿಯೊಬ್ಬರಿಗೂ ಪತ್ರ ಬರೆದು ಮನವಿ ಮಾಡಲಾಗಿತ್ತು.
ಆದರೆ ಈ ಮನವಿಗೆ ಸಚಿವರು ಮತ್ತು ಶಾಸಕರು ನಿರೀಕ್ಷಿತ ಲಕ್ಷ್ಯ ನೀಡಿಲ್ಲ ಮತ್ತು ಅನುದಾನವನ್ನು ನೀಡಿಲ್ಲ. ಇದು ಕೆಪಿಸಿಸಿ ಬಿಲ್ಡಿಂಗ್ ಸಮಿತಿಯಲ್ಲಿ ಆಕ್ರೋಶ ಮೂಡಿಸಿದ್ದು, ಆದಷ್ಟು ಬೇಗ ಧನ ಸಹಾಯ ಮಾಡುವಂತೆ ಸೂಚಿಸಲಾಗಿದೆ. ಈ ವಿದ್ಯಮಾನ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದ್ದು ಸಂಪುಟದ ಸದಸ್ಯರು ಸೂಚಿತ ಅನುದಾನ ನೀಡದೇ ಇದ್ದರೆ ತಕ್ಷಣ ಕೆಪಿಸಿಸಿ ಕಚೇರಿಗೆ ಕಳುಹಿಸುವಂತೆ ಆದೇಶ ನೀಡಿದ್ದಾರೆ.
ಇದರ ಜತೆಗೆ ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಬೇಕೆಂಬ ಮಹತ್ವದ ನಿರ್ಣಯವನ್ನು ಈ ಸಭೆತ್ಯಲ್ಲಿ ತೆಗೆದುಕೊಳ್ಳಲಾಗಿದೆ. ಈ ಸರ್ಕಾರದ ಅವಧಿ ಮುಕ್ತಾಯವಾಗುವುದರೊಳಗಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT