ಕಾಂಗ್ರೆಸ್(ಕಚೇರಿ) 
ಜಿಲ್ಲಾ ಸುದ್ದಿ

ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರು

ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ನಡೆದ ಕೆಪಿಸಿಸಿ ಬಿಲ್ಡಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಈಗಿರುವ ಕೆಪಿಸಿಸಿ ಕಚೇರಿ ಹಿಂಭಾಗದ ಜಾಗದಲ್ಲಿ ನಾಲ್ಕು ಅಂತಸ್ತಿನ ಕೆಪಿಸಿಸಿ ಭವನ ನಿರ್ಮಿಸಲಾಗುತ್ತಿದೆ. ಸುಮಾರು 20 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಕಟ್ಟಡಕ್ಕೆ ಕಾಂಗ್ರೆಸ್ ನ ಎಲ್ಲಾ ಸಂಸದರು, ಶಾಸಕರು, ಸಚಿವರು ಮಾಜಿ ಶಾಸಕ, ಸಂಸದ, ಸಚಿವರು ಆರ್ಥಿಕ ನೆರವು ನೀಡುವಂತೆ ಡಾ.ಜಿ ಪರಮೇಶ್ವರ್ ಅವರು ಪತ್ರ ಬರೆದಿದ್ದರು.
ನೀವೆಲ್ಲರೂ ಈ ಮಟ್ಟಕ್ಕೆ ಬೆಳೆಯಲು ಪಕ್ಷವೇ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೆ ದೇಗುಲವಿದ್ದಂತೆ. ಹೀಗಾಗಿ ಪಕ್ಷದ ಕಟ್ಟಡ ನಿರ್ಮಾಣಕ್ಕೆ ಉದಾರ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು. ಸಚಿವರು ಮತ್ತು ಸಂಸದರು ರೂ 5 ಲಕ್ಷ ಹಾಗೂ ಶಾಸಕರು 2 ಲಕ್ಷ ನೆರವು ನೀಡುವಂತೆ ಪ್ರತಿಯೊಬ್ಬರಿಗೂ ಪತ್ರ ಬರೆದು ಮನವಿ ಮಾಡಲಾಗಿತ್ತು.
ಆದರೆ ಈ ಮನವಿಗೆ ಸಚಿವರು ಮತ್ತು ಶಾಸಕರು ನಿರೀಕ್ಷಿತ ಲಕ್ಷ್ಯ ನೀಡಿಲ್ಲ ಮತ್ತು ಅನುದಾನವನ್ನು ನೀಡಿಲ್ಲ. ಇದು ಕೆಪಿಸಿಸಿ ಬಿಲ್ಡಿಂಗ್ ಸಮಿತಿಯಲ್ಲಿ ಆಕ್ರೋಶ ಮೂಡಿಸಿದ್ದು, ಆದಷ್ಟು ಬೇಗ ಧನ ಸಹಾಯ ಮಾಡುವಂತೆ ಸೂಚಿಸಲಾಗಿದೆ. ಈ ವಿದ್ಯಮಾನ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದ್ದು ಸಂಪುಟದ ಸದಸ್ಯರು ಸೂಚಿತ ಅನುದಾನ ನೀಡದೇ ಇದ್ದರೆ ತಕ್ಷಣ ಕೆಪಿಸಿಸಿ ಕಚೇರಿಗೆ ಕಳುಹಿಸುವಂತೆ ಆದೇಶ ನೀಡಿದ್ದಾರೆ.
ಇದರ ಜತೆಗೆ ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಬೇಕೆಂಬ ಮಹತ್ವದ ನಿರ್ಣಯವನ್ನು ಈ ಸಭೆತ್ಯಲ್ಲಿ ತೆಗೆದುಕೊಳ್ಳಲಾಗಿದೆ. ಈ ಸರ್ಕಾರದ ಅವಧಿ ಮುಕ್ತಾಯವಾಗುವುದರೊಳಗಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT