ಕಾಂಗ್ರೆಸ್(ಕಚೇರಿ) 
ಜಿಲ್ಲಾ ಸುದ್ದಿ

ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರು

ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ನಡೆದ ಕೆಪಿಸಿಸಿ ಬಿಲ್ಡಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಈಗಿರುವ ಕೆಪಿಸಿಸಿ ಕಚೇರಿ ಹಿಂಭಾಗದ ಜಾಗದಲ್ಲಿ ನಾಲ್ಕು ಅಂತಸ್ತಿನ ಕೆಪಿಸಿಸಿ ಭವನ ನಿರ್ಮಿಸಲಾಗುತ್ತಿದೆ. ಸುಮಾರು 20 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಕಟ್ಟಡಕ್ಕೆ ಕಾಂಗ್ರೆಸ್ ನ ಎಲ್ಲಾ ಸಂಸದರು, ಶಾಸಕರು, ಸಚಿವರು ಮಾಜಿ ಶಾಸಕ, ಸಂಸದ, ಸಚಿವರು ಆರ್ಥಿಕ ನೆರವು ನೀಡುವಂತೆ ಡಾ.ಜಿ ಪರಮೇಶ್ವರ್ ಅವರು ಪತ್ರ ಬರೆದಿದ್ದರು.
ನೀವೆಲ್ಲರೂ ಈ ಮಟ್ಟಕ್ಕೆ ಬೆಳೆಯಲು ಪಕ್ಷವೇ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೆ ದೇಗುಲವಿದ್ದಂತೆ. ಹೀಗಾಗಿ ಪಕ್ಷದ ಕಟ್ಟಡ ನಿರ್ಮಾಣಕ್ಕೆ ಉದಾರ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು. ಸಚಿವರು ಮತ್ತು ಸಂಸದರು ರೂ 5 ಲಕ್ಷ ಹಾಗೂ ಶಾಸಕರು 2 ಲಕ್ಷ ನೆರವು ನೀಡುವಂತೆ ಪ್ರತಿಯೊಬ್ಬರಿಗೂ ಪತ್ರ ಬರೆದು ಮನವಿ ಮಾಡಲಾಗಿತ್ತು.
ಆದರೆ ಈ ಮನವಿಗೆ ಸಚಿವರು ಮತ್ತು ಶಾಸಕರು ನಿರೀಕ್ಷಿತ ಲಕ್ಷ್ಯ ನೀಡಿಲ್ಲ ಮತ್ತು ಅನುದಾನವನ್ನು ನೀಡಿಲ್ಲ. ಇದು ಕೆಪಿಸಿಸಿ ಬಿಲ್ಡಿಂಗ್ ಸಮಿತಿಯಲ್ಲಿ ಆಕ್ರೋಶ ಮೂಡಿಸಿದ್ದು, ಆದಷ್ಟು ಬೇಗ ಧನ ಸಹಾಯ ಮಾಡುವಂತೆ ಸೂಚಿಸಲಾಗಿದೆ. ಈ ವಿದ್ಯಮಾನ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದ್ದು ಸಂಪುಟದ ಸದಸ್ಯರು ಸೂಚಿತ ಅನುದಾನ ನೀಡದೇ ಇದ್ದರೆ ತಕ್ಷಣ ಕೆಪಿಸಿಸಿ ಕಚೇರಿಗೆ ಕಳುಹಿಸುವಂತೆ ಆದೇಶ ನೀಡಿದ್ದಾರೆ.
ಇದರ ಜತೆಗೆ ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಬೇಕೆಂಬ ಮಹತ್ವದ ನಿರ್ಣಯವನ್ನು ಈ ಸಭೆತ್ಯಲ್ಲಿ ತೆಗೆದುಕೊಳ್ಳಲಾಗಿದೆ. ಈ ಸರ್ಕಾರದ ಅವಧಿ ಮುಕ್ತಾಯವಾಗುವುದರೊಳಗಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT