ಕಾಂಗ್ರೆಸ್(ಕಚೇರಿ) 
ಜಿಲ್ಲಾ ಸುದ್ದಿ

ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರು

ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ನಡೆದ ಕೆಪಿಸಿಸಿ ಬಿಲ್ಡಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಈಗಿರುವ ಕೆಪಿಸಿಸಿ ಕಚೇರಿ ಹಿಂಭಾಗದ ಜಾಗದಲ್ಲಿ ನಾಲ್ಕು ಅಂತಸ್ತಿನ ಕೆಪಿಸಿಸಿ ಭವನ ನಿರ್ಮಿಸಲಾಗುತ್ತಿದೆ. ಸುಮಾರು 20 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಕಟ್ಟಡಕ್ಕೆ ಕಾಂಗ್ರೆಸ್ ನ ಎಲ್ಲಾ ಸಂಸದರು, ಶಾಸಕರು, ಸಚಿವರು ಮಾಜಿ ಶಾಸಕ, ಸಂಸದ, ಸಚಿವರು ಆರ್ಥಿಕ ನೆರವು ನೀಡುವಂತೆ ಡಾ.ಜಿ ಪರಮೇಶ್ವರ್ ಅವರು ಪತ್ರ ಬರೆದಿದ್ದರು.
ನೀವೆಲ್ಲರೂ ಈ ಮಟ್ಟಕ್ಕೆ ಬೆಳೆಯಲು ಪಕ್ಷವೇ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೆ ದೇಗುಲವಿದ್ದಂತೆ. ಹೀಗಾಗಿ ಪಕ್ಷದ ಕಟ್ಟಡ ನಿರ್ಮಾಣಕ್ಕೆ ಉದಾರ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು. ಸಚಿವರು ಮತ್ತು ಸಂಸದರು ರೂ 5 ಲಕ್ಷ ಹಾಗೂ ಶಾಸಕರು 2 ಲಕ್ಷ ನೆರವು ನೀಡುವಂತೆ ಪ್ರತಿಯೊಬ್ಬರಿಗೂ ಪತ್ರ ಬರೆದು ಮನವಿ ಮಾಡಲಾಗಿತ್ತು.
ಆದರೆ ಈ ಮನವಿಗೆ ಸಚಿವರು ಮತ್ತು ಶಾಸಕರು ನಿರೀಕ್ಷಿತ ಲಕ್ಷ್ಯ ನೀಡಿಲ್ಲ ಮತ್ತು ಅನುದಾನವನ್ನು ನೀಡಿಲ್ಲ. ಇದು ಕೆಪಿಸಿಸಿ ಬಿಲ್ಡಿಂಗ್ ಸಮಿತಿಯಲ್ಲಿ ಆಕ್ರೋಶ ಮೂಡಿಸಿದ್ದು, ಆದಷ್ಟು ಬೇಗ ಧನ ಸಹಾಯ ಮಾಡುವಂತೆ ಸೂಚಿಸಲಾಗಿದೆ. ಈ ವಿದ್ಯಮಾನ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದ್ದು ಸಂಪುಟದ ಸದಸ್ಯರು ಸೂಚಿತ ಅನುದಾನ ನೀಡದೇ ಇದ್ದರೆ ತಕ್ಷಣ ಕೆಪಿಸಿಸಿ ಕಚೇರಿಗೆ ಕಳುಹಿಸುವಂತೆ ಆದೇಶ ನೀಡಿದ್ದಾರೆ.
ಇದರ ಜತೆಗೆ ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಬೇಕೆಂಬ ಮಹತ್ವದ ನಿರ್ಣಯವನ್ನು ಈ ಸಭೆತ್ಯಲ್ಲಿ ತೆಗೆದುಕೊಳ್ಳಲಾಗಿದೆ. ಈ ಸರ್ಕಾರದ ಅವಧಿ ಮುಕ್ತಾಯವಾಗುವುದರೊಳಗಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT