ಲಾರಿ ಮುಷ್ಕರದಿಂದಾಗಿ ಸಂಚಾರವಿಲ್ಲದೆ, ಸಾಗಾಟವಿಲ್ಲದೆ ನಿಲ್ದಾಣಗಳಲ್ಲಿ ನಿಂತಿರುವ ಲಾರಿಗಳು 
ಜಿಲ್ಲಾ ಸುದ್ದಿ

5ನೇ ದಿನಕ್ಕೆ ಲಾರಿ ಮುಷ್ಕರ

ಹೆದ್ದಾರಿಗಳಲ್ಲಿ ಟೋಲ್ ವ್ಯವಸ್ಥೆ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ...

ಬೆಂಗಳೂರು: ಹೆದ್ದಾರಿಗಳಲ್ಲಿ ಟೋಲ್ ವ್ಯವಸ್ಥೆ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಚಾಲಕರ ಕೆಲ ಸಂಘಟನೆಗಳು ನಡೆಸುತ್ತಿರುವ ಮುಷ್ಕರ ಐದನೇ ದಿನಕ್ಕೆ ಕಾಲಿರಿಸಿದೆ.

ಈ ನಡುವೆ ಕೇಂದ್ರ ಸಾರಿಗೆ ಸಚಿವ ಲಾರಿ ಮಾಲೀಕರ ಸಂಘಟನೆಗಳ ಮುಖಂಡರೊಂದಿಗೆ ಸೋಮವಾರ ಸಂಜೆ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಷ್ಕರ ಮುಂದುವರೆಸಬೇಕೋ ಬೇಡವೋ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಲಾರಿಗಳ ಸಂಚಾರ ಸ್ಥಗಿತಗೊಂಡಿರುವ ಕಾರಣ ಸರ್ಕಾರ ಹಾಗೂ ಲಾರಿ ಮಾಲೀಕರಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗುತ್ತಿದೆ. ಒಂದು ವೇಳೆ ಮುಷ್ಕರ ಇನ್ನಷ್ಟು ದಿನ ಮುಂದುವರೆದರೆ ಕಟ್ಟಡ ನಿರ್ಮಾಣ ವಸ್ತುಗಳು ಸೇರಿದಂತೆ ಎಲ್ಲಾ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಲಿದೆ. ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಉಂಟಾಗಿದೆ.ಇದು ಸಾಮಾನ್ಯ ಜನ ಜೀವನದ ಮೇಲೆ ಋಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು. ಪ್ರತಿಭಟನೆ ಆರಂಭವಾಗಿ 5 ದಿನಗಳ ಕಳೆದರೂ ಮುಷ್ಕರ ಅಂತಹ ಪರಿಣಾಮ ಬೀರಿಲ್ಲ.

ಲಾರಿ ಸಂಘಟನೆಗಳಲ್ಲಿ ಮುಷ್ಕರ ವಿಚಾರವಾಗಿ ಭಿನ್ನಾಭಿಪ್ರಾಯ ಇರುವುದರಿಂದ ಕೆಲ ಲಾರಿ ಮಾಲೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದೆ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೀಗಾಗಿ, ಐದನೇ ದಿನಕ್ಕೆ ಮುಷ್ಕರ ಕಾಲಿಟ್ಟಿದ್ದರೂ ಪ್ರತಿಭಟನೆಯ ಬಿಸಿ ಯಾರಿಗೂ ಅಷ್ಟಾಗಿ ತಟ್ಟಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT