ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ 
ಜಿಲ್ಲಾ ಸುದ್ದಿ

ಬೆಂಗಳೂರಲ್ಲಿ ಗ್ಯಾಂಗ್ ರೇಪ್: ಇಬ್ಬರ ಬಂಧನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ವರ್ಷದ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 22 ವರ್ಷದ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ.

ಯೋಗೇಶ್ ಮತ್ತು ಸತೀಶ್ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಟಿಟಿ ವಾಹನ ಪತ್ತೆ ಹಚ್ಚಿ ಬಂಧಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನವರು,ಅವರು ಟಿಟಿ ಚಾಲಕ ಮತ್ತು ಕ್ಲೀನರ್ ಎಂದು ತಿಳಿದು ಬಂದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿಗೆ ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ದುಷ್ಕೃತ್ಯಕ್ಕೆ ಬಳಸಿರುವ ವಾಹನವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಶಕ್ಕೆ ಪಡೆದಿರುವ ವಾಹನ ಕೆಎ 03 ಬಿ 1863 ಸಂಖ್ಯೆಯ ದ್ದಾಗಿದ್ದು, ಶಂಕರ್‌ .ಎಲ್‌ ಎನ್ನುವವರಿಗೆ ಸೇರಿದ ವಾಹನ ಇದಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಬೆಂಗಳೂರಿನ ಮಡಿವಾಳ ಜಂಕ್ಷನ್ ನಲ್ಲಿ ಯುವತಿ ಮೊನ್ನೆ ಶನಿವಾರ ಕಚೇರಿಯಿಂದ ಕೆಲಸ ಮುಗಿಸಿಕೊಂಡು ತಾನು ವಾಸ್ತವ್ಯ ಹೂಡಿರುವ ಪಿಜಿಗೆ ತೆರಳಲು ಕಾಯುತ್ತಿದ್ದ ವೇಳೆ ವ್ಯಾನ್ ನಲ್ಲಿ ಬಂದ ಇಬ್ಬರು ಎಲ್ಲಿಗೆ ಹೋಗಬೇಕೆಂದು ಕೇಳಿ ಯುವತಿಯನ್ನು ಹತ್ತಿಸಿಕೊಂಡಿದ್ದಾರೆ.

ಸ್ವಲ್ಪ ದೂರ ಹೋದ ನಂತರ ಚಾಕು ತೋರಿಸಿ ಬೆದರಿಕೆ ಹಾಕಿ ದೊಮ್ಮಲೂರು ಹತ್ತಿರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ನಂತರ ಯುವತಿಯನ್ನು ಮಡಿವಾಳ ಜಂಕ್ಷನ್ ಗೆ ಕರೆತಂದು ಬಿಟ್ಟು ಓಡಿ ಹೋಗಿದ್ದಾರೆ.ಅಲ್ಲಿಂದ ಸ್ನೇಹಿತರಿಗೆ ಕರೆ ಮಾಡಿದ ಯುವತಿ ಪೊಲೀಸರ ನೆರವಿನಿಂದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ನಿನ್ನೆಯಷ್ಟೇ ಬಿಡುಗಡೆ ಹೊಂದಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT