ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

108ಕ್ಕೆ 150 ಹೊಸ ಆ್ಯಂಬುಲೆನ್ಸ್ ಸೇರ್ಪಡೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ. ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ವಾಹನಗಳ ಸೇವೆಗೆ ಚಾಲನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ.

ಬುಧವಾರ ವಿಧಾನಸೌಧದ ಮುಂದೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ವಾಹನಗಳ ಸೇವೆಗೆ ಚಾಲನೆ ನೀಡುವರು. ಯೋಜನೆ ಕುರಿತು ವಿವರಿಸಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸದ್ಯ ರಾಜ್ಯದಲ್ಲಿ 711 ಆಂಬ್ಯುಲೆನ್ಸ್ ಗಳು ತುರ್ತು ಸೇವೆಗಾಗಿ ಮೀಸಲಾಗಿತ್ತು, ಇದೀಗ ಹೊಸ ವಾಹನಗಳು
ಸೇರ್ಪಡೆಯಾಗುತ್ತಿವೆ. ಈ ಯೋಜನೆ ಮೂಲಕ ಎಲ್ಲಾ ರೀತಿಯ ತುರ್ತು ಸಂದರ್ಭಗಳಲ್ಲಿ ಸಿಗುವಂತಹ ಸೇವೆ, ಹೆರಿಗೆ ಅಥವಾ ಪ್ರಸೂತಿ ಸಂದರ್ಭದಲ್ಲಿ, ರಸ್ತೆ ಅಥವಾ ಇನ್ನಿತರ ಅಪಘಾತಗಳಾದಾಗ ತುರ್ತು ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.

ಸುಮಾರು 85 ಸಾವಿರ ಜನಸಂಖ್ಯೆಗೆ ಒಂದರಂತೆ ಆಂಬ್ಯುಲೆನ್ಸ್ ಒದಗಿಸಲಾಗಿದೆ. ಇವುಗಳನ್ನು ಭೌಗೋಳಿಕವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ಇರಿಸಲಾಗಿದೆ. ಎಂದರು. ಈವರೆಗೆ ಆರೋಗ್ಯ ಕವಚ ಸೇವೆ ಯನ್ನು 3803024 ಫಲಾನುಭವಿಗಳು ಸೌಲಭ್ಯ ಬಳಸಿಕೊಂಡಿದ್ದಾರೆ. ಇದರಲ್ಲಿ 1556593(ಶೇ.41) ಗರ್ಭಿಣಿಯರೇ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT