ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

108ಕ್ಕೆ 150 ಹೊಸ ಆ್ಯಂಬುಲೆನ್ಸ್ ಸೇರ್ಪಡೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ. ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ವಾಹನಗಳ ಸೇವೆಗೆ ಚಾಲನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ.

ಬುಧವಾರ ವಿಧಾನಸೌಧದ ಮುಂದೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ವಾಹನಗಳ ಸೇವೆಗೆ ಚಾಲನೆ ನೀಡುವರು. ಯೋಜನೆ ಕುರಿತು ವಿವರಿಸಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸದ್ಯ ರಾಜ್ಯದಲ್ಲಿ 711 ಆಂಬ್ಯುಲೆನ್ಸ್ ಗಳು ತುರ್ತು ಸೇವೆಗಾಗಿ ಮೀಸಲಾಗಿತ್ತು, ಇದೀಗ ಹೊಸ ವಾಹನಗಳು
ಸೇರ್ಪಡೆಯಾಗುತ್ತಿವೆ. ಈ ಯೋಜನೆ ಮೂಲಕ ಎಲ್ಲಾ ರೀತಿಯ ತುರ್ತು ಸಂದರ್ಭಗಳಲ್ಲಿ ಸಿಗುವಂತಹ ಸೇವೆ, ಹೆರಿಗೆ ಅಥವಾ ಪ್ರಸೂತಿ ಸಂದರ್ಭದಲ್ಲಿ, ರಸ್ತೆ ಅಥವಾ ಇನ್ನಿತರ ಅಪಘಾತಗಳಾದಾಗ ತುರ್ತು ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.

ಸುಮಾರು 85 ಸಾವಿರ ಜನಸಂಖ್ಯೆಗೆ ಒಂದರಂತೆ ಆಂಬ್ಯುಲೆನ್ಸ್ ಒದಗಿಸಲಾಗಿದೆ. ಇವುಗಳನ್ನು ಭೌಗೋಳಿಕವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ಇರಿಸಲಾಗಿದೆ. ಎಂದರು. ಈವರೆಗೆ ಆರೋಗ್ಯ ಕವಚ ಸೇವೆ ಯನ್ನು 3803024 ಫಲಾನುಭವಿಗಳು ಸೌಲಭ್ಯ ಬಳಸಿಕೊಂಡಿದ್ದಾರೆ. ಇದರಲ್ಲಿ 1556593(ಶೇ.41) ಗರ್ಭಿಣಿಯರೇ ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT