ಬರಗೂರು ರಾಮಚಂದ್ರಪ್ಪ 
ಜಿಲ್ಲಾ ಸುದ್ದಿ

ಬಂದೂಕನ್ನೇ ಬಾಯಿ ಮಾಡಿಕೊಂಡವರ ಕೃತ್ಯ: ಬರಗೂರು

ಬಾಯಿಯಲ್ಲಿ ಬಂದೂಕು ಇಟ್ಟುಕೊಂಡವರು ಕವಿಗಳ ಭಾವನೆಗಳನ್ನು ಸುಡಲು ಪ್ರಯತ್ನಿಸಿದರೆ, ಬಂದೂಕವನ್ನೇ ಬಾಯಿಯಾಗಿ ಮಾಡಿಕೊಂಡವರು...

ಬೆಂಗಳೂರು: ಬಾಯಿಯಲ್ಲಿ ಬಂದೂಕು ಇಟ್ಟುಕೊಂಡವರು ಕವಿಗಳ ಭಾವನೆಗಳನ್ನು ಸುಡಲು ಪ್ರಯತ್ನಿಸಿದರೆ, ಬಂದೂಕವನ್ನೇ ಬಾಯಿಯಾಗಿ ಮಾಡಿಕೊಂಡವರು ಕೆಲ ವದಂತಿಗಳನ್ನು ಕೇಳಿ ಸಾಹಿತಿಗಳ ಹತ್ಯೆ ಮಾಡುತ್ತಿರುವುದು ದುರಂತ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.

ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆ ಮಾಡಿದವರು ಇಂತಹ ಮನಸ್ಥಿತಿಯನ್ನು ಹೊಂದಿದವರಾಗಿದ್ದಾರೆ. ಕೆಲ ರಾಜಕೀಯ ಮುಖಂಡರು ಹಿತಿಗಳ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ನೋಡಿದರೆ ಬಹಳ ಬೇಸರವಾಗುತ್ತದೆ ಎಂದು ಹೇಳಿದರು.

ಕನ್ನಡ ಜನಶಕ್ತಿ ಕೇಂದ್ರ, ಐಸಿರಿ ಪ್ರಕಾಶನ ಹೊರತಂದಿರುವ ಪಿ. ಮಲ್ಲಿಕಾರ್ಜುನಪ್ಪ ಅವರು ರಚಿಸಿರುವ `ಕುಸುಮಮಾಲೆ' ಕವನ ಸಂಕಲನವನ್ನು ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕಸಾಪ ಮಾಜಿ ಅಧ್ಯಕ್ಷ ಡಾ. ಆರ್. ಕೆ. ನಲ್ಲೂರು ಪ್ರಸಾದ್, ಸಾಹಿತಿ ಡಾ. ಬಸವರಾಜ ಕಲ್ಗುಡಿ, ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT