ಬರಗೂರು ರಾಮಚಂದ್ರಪ್ಪ 
ಜಿಲ್ಲಾ ಸುದ್ದಿ

ಬಂದೂಕನ್ನೇ ಬಾಯಿ ಮಾಡಿಕೊಂಡವರ ಕೃತ್ಯ: ಬರಗೂರು

ಬಾಯಿಯಲ್ಲಿ ಬಂದೂಕು ಇಟ್ಟುಕೊಂಡವರು ಕವಿಗಳ ಭಾವನೆಗಳನ್ನು ಸುಡಲು ಪ್ರಯತ್ನಿಸಿದರೆ, ಬಂದೂಕವನ್ನೇ ಬಾಯಿಯಾಗಿ ಮಾಡಿಕೊಂಡವರು...

ಬೆಂಗಳೂರು: ಬಾಯಿಯಲ್ಲಿ ಬಂದೂಕು ಇಟ್ಟುಕೊಂಡವರು ಕವಿಗಳ ಭಾವನೆಗಳನ್ನು ಸುಡಲು ಪ್ರಯತ್ನಿಸಿದರೆ, ಬಂದೂಕವನ್ನೇ ಬಾಯಿಯಾಗಿ ಮಾಡಿಕೊಂಡವರು ಕೆಲ ವದಂತಿಗಳನ್ನು ಕೇಳಿ ಸಾಹಿತಿಗಳ ಹತ್ಯೆ ಮಾಡುತ್ತಿರುವುದು ದುರಂತ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.

ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆ ಮಾಡಿದವರು ಇಂತಹ ಮನಸ್ಥಿತಿಯನ್ನು ಹೊಂದಿದವರಾಗಿದ್ದಾರೆ. ಕೆಲ ರಾಜಕೀಯ ಮುಖಂಡರು ಹಿತಿಗಳ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ನೋಡಿದರೆ ಬಹಳ ಬೇಸರವಾಗುತ್ತದೆ ಎಂದು ಹೇಳಿದರು.

ಕನ್ನಡ ಜನಶಕ್ತಿ ಕೇಂದ್ರ, ಐಸಿರಿ ಪ್ರಕಾಶನ ಹೊರತಂದಿರುವ ಪಿ. ಮಲ್ಲಿಕಾರ್ಜುನಪ್ಪ ಅವರು ರಚಿಸಿರುವ `ಕುಸುಮಮಾಲೆ' ಕವನ ಸಂಕಲನವನ್ನು ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕಸಾಪ ಮಾಜಿ ಅಧ್ಯಕ್ಷ ಡಾ. ಆರ್. ಕೆ. ನಲ್ಲೂರು ಪ್ರಸಾದ್, ಸಾಹಿತಿ ಡಾ. ಬಸವರಾಜ ಕಲ್ಗುಡಿ, ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT