ರಾಘವೇಶ್ವರ ಭಾರತಿ 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀಗೆ ಕೋರ್ಟ್ ಸಮನ್ಸ್

ರಾಮಕಥಾ ಗಾಯಕಿ ಪ್ರೇಮಲತಾ ದಾಖಲಿಸಿ ದ್ದ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಪ್ರಕ್ರಿಯೆ...

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ದಾಖಲಿಸಿ ದ್ದ ಅತ್ಯಾಚಾರ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಪ್ರಕ್ರಿಯೆ ಅನ್ವಯ ಆರೋಪಿಯಾಗಿರುವ ರಾಘವೇಶ್ವರ ಸ್ವಾಮೀಜಿ ಅ.9ರಂದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಎಸಿಎಂಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 
ಇತ್ತೀಚೆಗಷ್ಟೇ ಸಿಐಡಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಬೇಕಿರುವು ದರಿಂದ ನಿರೀಕ್ಷಣಾ ಜಾಮೀನಿನಲ್ಲಿರುವ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕ್ರಿಯೆಗಳನ್ನು ಪೂರೈಸಬೇಕು. ಅದಾದ ನಂತರ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗುತ್ತದೆ. 
ಅರ್ಜಿ ವಿಚಾರಣೆ ಮುಂದೂಡಿಕೆ: ವೈದ್ಯ ಪರೀಕ್ಷೆಗೆ ಹಾಜರಾಗದೆ ಜಾಮೀನು ಷರತ್ತು ಉಲ್ಲಂŒಸಿದ ರಾಘವೇಶ್ವರ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕೆಂದು ಕೋರಿ ಸಿಐಡಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದೆ. 
ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಅಂತಿಮವಾಗಿ ಸ್ವಾಮೀಜಿಗೆ ಪರೀಕ್ಷೆಗೆ ಹಾಜರಾಗಿರಲಿಲ್ಲ. ಈ ಮೂಲಕ ಸ್ವಾಮೀಜಿ ತನಿಖೆಗೆ¸ ಹೀಗಾಗಿ, ಅವರಿಗೆ ಮಂಜೂರು ಮಾಡಿರುವ ಜಾಮೀನು ರದ್ದುಗೊಳಿಸಬೇಕೆಂದು ಸಿಐಡಿ ಪರ ಸರ್ಕಾರಿ ವಕೀಲರು ಅರ್ಜಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT