ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

104 ಕೋಟಿ ಮೌಲ್ಯದ ಭೂಮಿ ವಶ

ಒತ್ತುವರಿ ತೆರವು ಮುಂದುವರಿಸಿರುವ ಜಿಲ್ಲಾಡಳಿತ ಶುಕ್ರವಾರ ಅಂದಾಜು ರು.104.90 ಕೋಟಿ ಮೌಲ್ಯದ 78.33 ಎಕರೆ ಭೂಮಿ ವಶಪಡಿಸಿಕೊಂಡಿದೆ...

ಬೆಂಗಳೂರು: ಒತ್ತುವರಿ ತೆರವು ಮುಂದುವರಿಸಿರುವ ಜಿಲ್ಲಾಡಳಿತ ಶುಕ್ರವಾರ ಅಂದಾಜು  ರು.104.90 ಕೋಟಿ ಮೌಲ್ಯದ 78.33 ಎಕರೆ ಭೂಮಿ ವಶಪಡಿಸಿಕೊಂಡಿದೆ. ದಕ್ಷಿಣ ತಾಲೂಕು, ಉತ್ತರಹಳ್ಳಿ ಹೋಬಳಿ,ಯಲಚೇನಹಳ್ಳಿಯ ಸ.ನಂ.45 ರಲ್ಲಿ ರು. 15 ಕೋಟಿ ಮೌಲ್ಯದ 1.7 ಎಕರೆಯನ್ನು ತಹಸೀಲ್ದಾರ್ ಡಾ.ಬಿ.ಆರ್.ದಯಾನಂದ್ ತಂಡ ತೆರವುಗೊಳಿಸಿತು. ಉತ್ತರ (ಅಪರ) ತಾಲೂಕು, ಜಾಲ ಹೋಬಳಿ, ಎಂ.ಹೊಸಹಳ್ಳಿಯ ಸ.ನಂ.116ರ 4.5 ಎಕರೆ, ಮಹದೇವ ಕೊಡಿಗೇಹಳ್ಳಿಯ ಸ.ನಂ.194 ರ 6.24 ಎಕರೆ, ಬೇಗೂರು ಗ್ರಾಮದ ಸ.ನಂ.30 ರಲ್ಲಿ 9.5 ಎಕರೆ, ಹೊಸಹಳ್ಳಿಯ ಸ.ನಂ.54 ರಲ್ಲಿ 8.1 ಎಕರೆ ಜಾಗದ ಒತ್ತುವರಿಯನ್ನು ತಹಸೀಲ್ದಾರ್ ಬಾಳಪ್ಪ ಹಂದಿಗುಂದ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಜಾಗ ಅಂದಾಜು ರು.27.90 ಕೋಟಿ ಮೌಲ್ಯ ಹೊಂದಿದೆ. ಪೂರ್ವ ತಾಲೂಕು, ಬಿದರಹಳ್ಳಿ ಹೋಬಳಿ, ಹಂಚರಹಳ್ಳಿಯ ಸ.ನಂ.20 ರಲ್ಲಿ 2.5 ಎಕರೆ, ರಘುಮೇನಹಳ್ಳಿಯ ಸ.ನಂ.13 ರಲ್ಲಿ 1.11 ಎಕರೆ, ಬೊಮ್ಮೇನಹಳ್ಳಿಯ ಸ.ನಂ.55 ರಲ್ಲಿ 9.25 ಎಕರೆ, ಬಿದರಹಳ್ಳಿ ಹೋಬಳಿ ತಿರುಮೇನಹಳ್ಳಿಯ ಸ.ನಂ.22 ರಲ್ಲಿ 14.5 ಎಕರೆ, ಸ.ನಂ.8ರಲ್ಲಿ 1 ಎಕರೆ, ಚಿಕ್ಕಬನಹಳ್ಳಿಯ ಸ.ನಂ.11 ರಲ್ಲಿ 12 ಎಕರೆ, ದೊಡ್ಡನೆಕ್ಕುಂದಿಯ ಸ.ನಂ.15
ರಲ್ಲಿ 1 ಎಕರೆ ಜಾಗದ ಒತ್ತುವರಿಯನ್ನು ತಹಸೀಲ್ದಾರ್ ಡಾ.ಹರೀಶ್ ನಾಯ್ಕ್  ತಂಡ ತೆರವುಗೊಳಿಸಿತು.
ಈ ಜಾಗ ಅಂದಾಜು ರು.40 ಕೋಟಿ ಮೌಲ್ಯ ಹೊಂದಿದೆ. ಆನೇಕಲ್ ತಾಲೂಕು, ಸಜಾಪುರ ಹೋಬಳಿ, ಎಸ್.ಮೇಡಹಳ್ಳಿಯ ಸ.ನಂ.158 ರಲ್ಲಿ 10 ಎಕರೆ, ಅತ್ತಿಬೆಲೆ ಹೋಬಳಿ ನೆರಳೂರು ಗ್ರಾಮದ ಸ.ನಂ.142 ರಲ್ಲಿ 11.25 ಎಕರೆ, ಕಸಬಾ ಹೋಬಳಿ, ಕಮ್ಮಸಂದ್ರದ ಸ.ನಂ.39 ರಲ್ಲಿ ಸ್ಮಶಾನ ಜಾಗ 1.20 ಎಕರೆ, ಅತ್ತಿಬೆಲೆ ಹೋಬಳಿ, ದಾಸನಪುರದ ಸ.ನಂ.97 ರಲ್ಲಿ 2.14 ಎಕರೆ, ಅರೇಹಳ್ಳಿಯ ನಕಾಶೆ ದಾರಿ 1 ಎಕರೆ ಜಾಗವನ್ನು ತಹಸೀಲ್ದಾರ್ ಅನಿಲ್ ಕುಮಾರ್ ನೇತೃತ್ವದ ತಂಡ ತೆರವು ಮಾಡಿತು. ಈ ಜಾಗ ರು.22 ಕೋಟಿ ಮೌಲ್ಯ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT