ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ 
ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀ ಕೋರ್ಟ್‍ಗೆ

ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಶುಕ್ರವಾರ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ...

ಬೆಂಗಳೂರು: ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಶುಕ್ರವಾರ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ, ನಿರೀಕ್ಷಣಾ ಜಾಮೀನಿನ ಷರತ್ತುಗಳ ನ್ನು ಪೂರೈಸಿದರು.

ಖುದ್ದು ಹಾಜರಾಗುವಂತೆ ಗುರುವಾರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಸ್ವಾಮೀಜಿ ಶುಕ್ರವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ 2 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತಾ ಶ್ಯೂರಿಟಿಯನ್ನು ಒದಗಿಸಿದರು. ಸ್ವಾಮೀಜಿ ಒದಗಿಸಿದ ದಾಖಲೆಗಳನ್ನು ನ್ಯಾಯಾಲಯ ಪರಿಶೀಲನೆ ನಡೆಸಿತು.

ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಸಲ್ಲಿಸಿರುವ ಚಾರ್ಜ್‍ಶೀಟ್ ಪ್ರತಿ ಲಭ್ಯವಾಗಿದೆಯಾ ಎಂದು ನ್ಯಾಯಾಲಯ ಸ್ವಾಮೀಜಿಯವರ ನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸ್ವಾಮೀಜಿ ಲಭ್ಯವಾಗಿದೆ ಎಂದರು.

ವಿಚಾರಣೆ ವೇಳೆ ಸಿಐಡಿ ಪರ ವಕೀಲರು ಹಾಜರಾಗದಿರುವುದಕ್ಕೆ ಸ್ವಾಮಿಜಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ ನ್ಯಾಯಾಲಯವು ಈ ವಿಚಾರಣೆಗೆ  ಸಿಐಡಿ ಪರ ವಕೀಲರು ಹಾಜರಾಗಲೇಬೇಕೆಂದ ನಿಯಮವಿಲ್ಲ ಹಾಗೂ ಅವರು ಬರುವವರೆಗೆ ಕಾಯುವ ಅಗತ್ಯ ಇಲ್ಲ ಎಂದು ಹೇಳಿ ಜಾಮೀನಿನ ಷರತ್ತುಗಳನ್ನು ಪೂರ್ಣಗೊಳಿಸಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ನಿಯಮಾನುಸಾರ ಸೆಷೆನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಿತು.

ಶುಕ್ರವಾರ ಬೆಳಗ್ಗೆಯೇ ಸ್ವಾಮೀಜಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.ಆದರೆ, ಪೂಜಾ ಕಾರ್ಯ ಇರುವ ಕಾರಣ ಮಧ್ಯಾಹ್ನ ಹಾಜರಾಗುವುದಾಗಿ ಸ್ವಾಮಿಜಿ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮಠದಲ್ಲಿನ ಪೂಜಾ ಕಾರ್ಯಕ್ರಮಗಳನ್ನು ನೇರವೇರಿಸಿದ ಬಳಿಕ ಸ್ವಾಮಿಜಿ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾದರು.

ಸ್ವಾಮೀಜಿಯವರು ತನಿಖೆಗೆ ಸಹಕರಿಸುವುದಾಗಿ ಹೇಳಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗದೆ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದು ಮುಂದಿನ ವಿಚಾರಣೆ ಅ.16ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT