ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪೇದೆಗೆ ಮೇಘರಿಕ್ ಪ್ರಶಂಸೆ

ಮಲ್ಲೇಶ್ವರ 15ನೇ ಕ್ರಾಸ್‍ನಲ್ಲಿ ಹೋಟೆಲ್ ನೌಕರನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕೇವಲ 3 ತಾಸಿನಲ್ಲೇ ಬಂಧಿಸಲು ಮುಖ್ಯಪಾತ್ರ ವಹಿಸಿದ ಕಾನ್ಸ್‍ಟೇಬಲ್ ಧನಂಜಯ್ ಅವರಿಗೆ ಪ್ರಶಂಸನಾ ಪತ್ರ ಮತ್ತು ರು.10 ಸಾವಿರ ಬಹುಮಾನ ನೀಡಿ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಗೌರವಿಸಿದರು...

ಬೆಂಗಳೂರು: ಮಲ್ಲೇಶ್ವರ 15ನೇ ಕ್ರಾಸ್‍ನಲ್ಲಿ ಹೋಟೆಲ್ ನೌಕರನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕೇವಲ 3 ತಾಸಿನಲ್ಲೇ ಬಂಧಿಸಲು ಮುಖ್ಯಪಾತ್ರ ವಹಿಸಿದ ಕಾನ್ಸ್‍ಟೇಬಲ್ ಧನಂಜಯ್ ಅವರಿಗೆ ಪ್ರಶಂಸನಾ ಪತ್ರ ಮತ್ತು ರು.10 ಸಾವಿರ ಬಹುಮಾನ ನೀಡಿ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಗೌರವಿಸಿದರು.

ಅ.3ರ ರಾತ್ರಿ 11.30ಕ್ಕೆ ಹೋಟೆಲ್ ನೌಕರ ಆಶಿಷ್ ಪಾಲ್ (32) ಎಂಬಾತ ಕೆಲಸ ಮುಗಿಸಿ ಮಲ್ಲೇಶ್ವರ 15ನೇ ಕ್ರಾಸ್ ನಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಎರಡು ಬೈಕ್ ನಲ್ಲಿ ಹಿಂಬಾಲಿಸಿ ಬಂದ ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಹೊಟ್ಟೆಗೆ ಇರಿದು ಮೊಬೈಲ್ ಫೋನ್ ದೋಚಿದ್ದರು. ಗಾಯಾಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ವಿಷಯ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಎಲ್ಲ ಸಿಬ್ಬಂದಿಗೆ ಮಾಹಿತಿ ರವಾನೆಯಾಗಿತ್ತು. ಕೊಲೆ ಮಾಡಿ ದೇವಯ್ಯ ಪಾರ್ಕ್ ಬಳಿ ಚಹಾ ಸೇವಿಸುತ್ತಾ ಅನುಮಾನಾಸ್ಪದವಾಗಿ ನಿಂತಿದ್ದ ಆರೋಪಿಗಳನ್ನು ರಾತ್ರಿ ಗಸ್ತಿನಲ್ಲಿದ್ದ ಕಾನ್ಸ್‍ಟೇಬಲ್ ಧನಂಜಯ್ ಬಂಧಿಸಿದ್ದರು. ಇವರ ಬಂಧನದಿಂದ ಒಟ್ಟು 15 ಅಪರಾಧ ಪ್ರಕರಣಗಳು ಬೆಳಕಿಗೆ ಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT