ಚೇತನಾ ತೀರ್ಥಹಳ್ಳಿ 
ಜಿಲ್ಲಾ ಸುದ್ದಿ

ಪತ್ರಕರ್ತೆ ಚೇತನಾ ತೀರ್ಥಹಳ್ಳಿಗೆ ಬೆದರಿಕೆ

ಫೇಸ್‍ಬುಕ್‍ನಲ್ಲಿ ಅಶ್ಲೀಲ, ನಿಂದನಾತ್ಮಕ, ಕೋಮು ಪ್ರಚೋದಕ ಸಂದೇಶಗಳು ಹಾಗೂ ಲೈಂಗಿಕ ದೌರ್ಜನ್ಯ...

ಬೆಂಗಳೂರು: ಫೇಸ್‍ಬುಕ್‍ನಲ್ಲಿ ಅಶ್ಲೀಲ, ನಿಂದನಾತ್ಮಕ, ಕೋಮು ಪ್ರಚೋದಕ ಸಂದೇಶಗಳು ಹಾಗೂ ಲೈಂಗಿಕ ದೌರ್ಜನ್ಯ,ಕೊಲೆ, ದೈಹಿಕ ಹಲ್ಲೆಗೆ ಪ್ರಚೋದನೆ ನೀಡುವ ಪೋಸ್ಟ್ ಗಳನ್ನು ಹಾಕಿದ್ದ ಮಧುಸೂದನಗೌಡ ಎಂಬಾತನ ವಿರುದ್ಧ ಪತ್ರಕರ್ತೆ ಚೇತನಾ ತೀರ್ಥಹಳ್ಳಿ ಹನುಮಂತನಗರ ಠಾಣೆಗೆ ದೂರು ನೀಡಿದ್ದಾರೆ. ತಾವು ಹೊಂದಿರುವ ಅಲಾವಿಕಾ ಹೆಸರಿನ ಫೇಸ್ ಬುಕ್ ಅಕೌಂಟ್‍ಗೆ ಮೇಲಿಂದ ಮೇಲೆ ಸಹಿಸಲಸಾದ್ಯವಾದ ಭಾಷೆಯಲ್ಲಿ ಸಂದೇಶಗಳು ಬರುತ್ತಿವೆ. ಎಲೆಕ್ಟ್ರಿಷಿಯನ್ ಆಗಿರುವ ಮಧುಸೂದನಗೌಡ ಎಂಬಾತ ವೈಯಕ್ತಿಕ ಭಾವನೆಗಳನ್ನು ನೋಯಿಸುವ, ಕೋಮುಭಾವನೆ ಕೆರಳಿಸುವ,ದೈಹಿಕ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯದ ಭೀತಿ ಉಂಟು ಮಾಡುತ್ತಿದ್ದಾನೆ. ಅಲ್ಲದೇ, ಬರೆಯುವ ಹಕ್ಕನ್ನು ಕಿತ್ತುಕೊಳ್ಳುವ ಆತನ ಹುನ್ನಾರ ಮಾನಸಿಕ ಹಿಂಸೆ ಉಂಟು ಮಾಡಿದೆ ಎಂದು ಚೇತನಾ ದೂರಿನಲ್ಲಿ ತಿಳಿಸಿದ್ದಾರೆ.

ಜಾಗೃತ ಭಾರತ ಹೆಸರಿನ ನಕಲಿ ಖಾತೆಯಿಂದಲೂ ಅಶ್ಲೀಲ ಸಂದೇಶಗಳು ಬರುತ್ತಿವೆ. ನಕಲಿ ಫೇಸ್ ಬುಕ್ ಖಾತೆ ತೆರೆದು ನನ್ನನ್ನು ಅವಮಾನಕಾರಿಯಾಗಿ ಬಳಸಲಾಗಿದೆ. ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಾ ಭೀತಿ ಮೂಡಿಸುತ್ತಿರುವ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಚೇತನಾ ಹೇಳಿದ್ದಾರೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ ಐರ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT