ಬಿಎನ್ ಮಂಜುನಾಥ್ ರೆಡ್ಡಿ 
ಜಿಲ್ಲಾ ಸುದ್ದಿ

ಕೆಸಿಡಿಸಿಯ ಅಧಿಕಾರಿಗಳಿಗೆ ಮಂಜುನಾಥ ರೆಡ್ಡಿ ತರಾಟೆ

ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ (ಕೆಸಿಡಿಸಿ)ಕ್ಕೆ ಭಾನುವಾರ ಭೇಟಿ ನೀಡಿದ ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು...

ಬೆಂಗಳೂರು: ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ (ಕೆಸಿಡಿಸಿ)ಕ್ಕೆ ಭಾನುವಾರ ಭೇಟಿ ನೀಡಿದ ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು ಅಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಿದರು. ತ್ಯಾಜ್ಯ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 
ಬೊಮ್ಮನಹಳ್ಳಿ ಸಮೀಪದ ಕೂಡ್ಲುವಿ ನಲ್ಲಿರುವ ಘಟಕಕ್ಕೆ ಭೇಟಿ ನೀಡಿದ ಅಲ್ಲಿನ ಸಮಸ್ಯೆಗಳನ್ನು ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ಸುತ್ತಲಿನ ಪ್ರದೇಶಗಳಲ್ಲಿ ಕಸದ ವಾಸನೆ ಸೇರಿದಂತೆ, ನೋಣ ಹಾಗೂ ಸೊಳ್ಳೆಗಳ ಕಾಟ ಹೆಚ್ಚಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ವೈಜ್ಞಾನಿಕವಾಗಿ ನಿರ್ವಹಣೆ ಮಾಡಿದರೆ ಯಾವುದೇ ರೀತಿಯ ಅಡ್ಡಪರಿ ಣಾಮಗಳು ಉಂಟಾಗದು. ಆದರೆ ಕರ್ತವ್ಯ ನಿರ್ವಹಣೆಯಲ್ಲಿನ ಬೇಜವಾಬ್ದಾರಿಯೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಅಭಿಪ್ರಾಯಪಟ್ಟರು. 
ಆವರಣದೊಳಗೆ ಹಂದಿಗಳು: ಮೇಯರ್ ಅವರು ಘಟಕದ ಪರಿಶೀಲನೆಗೆ ಆಗಮಿಸುವಾಗಹಂದಿಗಳು ಆವರಣದೊಳಗೆ ಓಡಾಡಿಕೊಂಡಿದ್ದವು. ಇದರಿಂದ ಕುಪಿತರಾದ ಅವರು ಸುತ್ತಮುತ್ತಲು ವಾಸಿಸುತ್ತಿರುವ ಹಂದಿಗಳನ್ನು ಕೆಲವೇ ದಿನಗಳ ಒಳಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದು.ಇದಕ್ಕೆ ದನಿ ಗೂಡಿಸಿದ ಸ್ಥಳೀಯ ಮುಖಂಡ ವಾಸುದೇವ ರೆಡ್ಡಿ, ಹಂದಿಗಳು ಬೀದಿಯಲ್ಲಿ ಓಡಾಡಿ ಕೊಂಡು ಸಾರ್ವಜನಿಕರಿಗೆ ತೊಂದರೆಯಾ ಗುತ್ತಿದ್ದರೂ ಅಧಿಕಾರಿಗಳು ಮೌನವಹಿಸಿದ್ದಾರೆಂದು ಆರೋಪಿಸಿದರು.
ಬಿಬಿಎಂಪಿಯಿಂದ ಕೋಟಿಗಟ್ಟಲೆ ಹಣ ವನ್ನು ಘಟಕಕ್ಕೆ ನೀಡುತ್ತಿದ್ದರೂ ಯಾವುದೇ ರೀತಿಯ ಆದಾಯ ಪಾಲಿಕೆಗೆ ಸಿಗುತ್ತಿಲ್ಲ. ಜತೆಗೆ ಕಸದ ನಿರ್ವಹಣೆ ಕೂಡ ಸರಿಯಾಗಿ ಆಗುತ್ತಿಲ್ಲ. ದುರ್ನಾತದ ವಿರುದ್ಧ ಸ್ಥಳೀಯರು ಪ್ರತಿಭಟನೆಗಿಳಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಖಾಸಗಿ ಕಂಪನಿಗಳಿಂದ ಕಸವನ್ನು ನೇರವಾಗಿ ವಿಲೇವಾರಿ ಮಾಡು ತ್ತಿರುವ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೇವಲ ಮಾರುಕಟ್ಟೆ ತ್ಯಾಜ್ಯಕ್ಕೆ ಸೀಮಿತವಾಗಿರುವ ಘಟಕದಲ್ಲಿ ಖಾಸಗಿ ಕಂಪನಿಗಳ ಕಸವನ್ನು ಏಕೆ ಸುರಿಯಲಾಗುತ್ತಿದೆ? ಕಸದ ಟೆಂಡರ್ ಪಡೆದ ಕೆಲವು ಪ್ರಭಾವಿಗಳ ಒತ್ತಡಕ್ಕೆ ಮಣಿದು ಅನಗತ್ಯ ಕಸವನ್ನು ವಿಲೇವಾರಿ ಮಾಡುತ್ತಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. 
ಅಧಿಕಾರಿಗಳಿಂದ ಸಮರ್ಪಕ ಉತ್ತರ ಬಾರದೇ ಇದ್ದಾಗ ಪ್ರವೇಶ ದ್ವಾರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸ್ಥಳೀಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು. ಭೇಟಿ ವೇಳೆ ಬಿಬಿಎಂಪಿ ಸದಸ್ಯೆ ಶೋಭಾ ಜಗದೀಶ್‍ಗೌಡ, ಕೆ. ವಾಸುದೇವ್, ರಂಜಿತ್, ಬಾಬು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ