ಜಿಲ್ಲಾ ಸುದ್ದಿ

ಕೈದಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಾಲ್ವರ ಬಂಧನ

Mainashree

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಕಾಟನ್ ಪೇಟೆ ಅಂಜನಪ್ಪ ಗಾರ್ಡನ್‍ನ ವೆನ್ನಿಲಾ (48), ಅಪ್ಪು (24), ಮಂಜುನಾಥ (33) ಮತ್ತು ವಿನೋದ್ ಕುಮಾರ್ (27) ಬಂಧಿತರು. 
ಇವರಿಂದ ರು.3.25 ಲಕ್ಷ ಮೌಲ್ಯದ 21 ಕೆಜಿ ಗಾಂಜಾ, ರು.1,800 ನಗದು, 1 ಕಾರು, 1 ದ್ವಿಚಕ್ರ ವಾಹನ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
SCROLL FOR NEXT