ಜಿಲ್ಲಾ ಸುದ್ದಿ

ಯಾವುದೇ ಕಾರಣಕ್ಕೂ ಮೈಷುಗರ್ ಕಾರ್ಖಾನೆ ಮಾರಾಟವಿಲ್ಲ: ಸಿಎಂ

Shilpa D

ಮಂಡ್ಯ: ಮಂಡ್ಯದಲ್ಲಿರುವ ಮೈಷುಗರ್ ಕಾರ್ಖಾನೆ ಯಾವುದೇ ಕಾರಣಕ್ಕೂ ಮಾರಾಟ ಮಾಡುವುದಾಗಲಿ  ಅಥವಾ ಖಾಸಗೀಕರಣ ಮಾಡುವುದಿಲ್ಲ. ಈ ಸಂಬಂಧ ಯಾವ ರೈತರು ಆತಂಕ , ಭಯ ಪಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಡ್ಯ - ಕೆರಗೋಡು- ಕೌಡ್ಲೆ-ಯಡಿಯೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೈತರೇ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಧೈರ್ಯ ತಂದುಕೂಳ್ಳಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಮತ್ತೊಮ್ಮೆ ರೈತರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರಿಗೆ ತಡೆಯೊಡ್ಡಿ ಪ್ರತಿಭಟನೆಗೆ ಮುಂದಾದ 20 ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

SCROLL FOR NEXT