ರಾಘವೇಶ್ವರ ಭಾರತಿ 
ಜಿಲ್ಲಾ ಸುದ್ದಿ

ಅತ್ಯಾಚಾರ ಪ್ರಕರಣ ಗವರ್ನರ್ ಗೆ ವರದಿ

ರಾಮಚಂದ್ರಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯಪಾಲ...

ಬೆಂಗಳೂರು: ರಾಮಚಂದ್ರಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯಪಾಲ ವಿ.ಆರ್.ವಾಲ ಅವರಿಗೆ ಕೂಲಂಕುಷ ವರದಿ ಸಲ್ಲಿಸಿದೆ. ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸಿ ದೂರುದಾರರಿಗೆ ನ್ಯಾಯ ದೊರಕಿಸುವ ಪ್ರಯತ್ನ ನಡೆಸಿದೆ ಎಂದು ವರದಿಯಲ್ಲಿ ಹೇಳಿದೆ. 
ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರಿ ಮತ್ತು ಮತ್ತೊಬ್ಬ ಮಹಿಳೆ ಮೇಲೆ ರಾಘವೇಶ್ವರ ಸ್ವಾಮಿ ಅತ್ಯಾಚಾರ ಮಾಡಿರುವ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಿದ್ದು, ಸಿಐಡಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಆದರೆ ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದರು. 
ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ರಾಜ್ಯಪಾಲ ವಿ.ಆರ್.ವಾಲ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದರು. ಆನಂತರ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ಈ ಪ್ರಕರಣದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣದ ತನಿಖೆ ವಿಳಂಬವಾಗುತ್ತಿರುವ ಬಗ್ಗೆಯೂ ಆಕ್ಷೇಪಿಸಿದ್ದರು. 
ಕೂಡಲೇ ವರದಿ ಸಲ್ಲಿಸುವಂತೆಯೂ ವಿ.ಆರ್.ವಾಲ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಯಿಂದ ನೀಡಿರುವ ಮಾರ್ಗದರ್ಶನದಂತೆ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಎರಡು ದಿನಗಳ ಹಿಂದೆಯೇ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರ ಸ್ವತಂತ್ರವಾಗಿ ತನಿಖೆ ನಡೆಸಿ ಅಗತ್ಯ ದಾಖಲೆ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದರಲ್ಲಿ ಯಾರಿಂದಲೂ ಹಸ್ತಕ್ಷೇಪ ಆಗುವುದಕ್ಕೆ ಸರ್ಕಾರ ಅವಕಾಶ ನೀಡಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. 
ಅಷ್ಟೇ ಅಲ್ಲ. ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮುಖ್ಯವಾಗಿ ತ್ವರಿತ ನ್ಯಾಯಾಲಯನಗಳನ್ನು ಸ್ಥಾಪಿಸಿ ಶೀಘ್ರ ನ್ಯಾಯ ದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಅವರು ವರದಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT