ಕೆ,ಎಸ್. ಈಶ್ವರಪ್ಪ 
ಜಿಲ್ಲಾ ಸುದ್ದಿ

ಹೇಳಿಕೆಗೆ ಕ್ಷಮೆ ಯಾಚಿಸಿದ ಕೆ.ಎಸ್ ಈಶ್ವರಪ್ಪ

ವಿವಾದಾತ್ಮಕ ಉತ್ತರ ನೀಡಿ ತೀವ್ರ ಟೀಕೆಗೊಳಗಾಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಕ್ಷಮೆ ಯಾಚಿಸಿದ್ದಾರೆ.

ಶಿವಮೊಗ್ಗ: ವರದಿಗಾರ್ತಿಯೊಬ್ಬರು ಕೇಳಿದ ಪ್ರಶ್ನೆಗೆ ವಿವಾದಾತ್ಮಕ ಉತ್ತರ ನೀಡಿ ತೀವ್ರ ಟೀಕೆಗೊಳಗಾಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಕ್ಷಮೆ ಯಾಚಿಸಿದ್ದಾರೆ.

'ನನ್ನ ಹೇಳಿಕೆಯಿಂದ ವರದಿಗಾರ್ತಿಗೆ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಆಕೆ ನನ್ನ ತಂಗಿ ಇದ್ದ ಹಾಗೆ. ನನ್ನ ಹೇಳಿಕೆಗೆ ವಿಷಾದ ವ್ಯಕ್ತ ಪಡಿಸಿ ,ರಾಜ್ಯದ ಜನರಲ್ಲಿ ಕ್ಷಮೆ ಯಾಚಿಸುತ್ತೇನೆ' ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಶ್ನಿಸಿದ ಖಾಸಗಿ ಸುದ್ದಿವಾಹಿನಿಯ ವರದಿಗಾರ್ತಿಗೆ "ನಿನ್ನನ್ನು ಯಾರೋ ಎಳೆದುಕೊಂಡು ಹೋಗಿ ರೇಪ್‌ ಮಾಡಿದರೆ ನಾವು ಪ್ರತಿಪಕ್ಷದವರು ಎಲ್ಲೋ ಇರುತ್ತೇವೆ. ಏನು ಮಾಡೋಕಾಗುತ್ತೆ' ಎಂದು ಈಶ್ವರಪ್ಪ ಅಸಭ್ಯವಾಗಿ ಉತ್ತರ ಕೊಟ್ಟಿದ್ದರು. ನಂತರ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಸಮರ್ಥನೆ ನೀಡಿದ್ದರು.

ಆದರೆ ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಶ್ವರಪ್ಪ ಕ್ಷಮೆ ಯಾಚಿಸಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT