ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸರ್ಕಾರಿ ಅಧಿಕಾರಿಗಳಿಂದಲೇ ಮಾನವ ಹಕ್ಕು ಉಲ್ಲಂಘನೆ

ಸರ್ಕಾರ ಹಾಗೂ ಅಧಿಕಾರಿಗಳಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು...

ಬೆಂಗಳೂರು: ಸರ್ಕಾರ ಹಾಗೂ ಅಧಿಕಾರಿಗಳಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿವೆ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ಧಿನಲ್ಲಿ ಶನಿವಾರ ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆ ಉದ್ಘಾಟಿಸಿ ಮಾತನಾಡಿದ ಅವರು, ಸಂಘಟನೆಗಳನ್ನು ಹುಟ್ಟು ಹಾಕುವುದೇ ದೊಡ್ಡ ಪುರುಷಾರ್ಥವಲ್ಲ. ಬಳಿಕ ಆ ಸಂಘಟನೆ ಹೇಗೆ ಕಾರ್ಯೋಖವಾಗುತ್ತದೆ ಎಂಬುದು ಮುಖ್ಯ. ಸಂವಿಧಾನದ ದೀಕ್ಷೆಯಾಗಿರುವ ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ದೇಶಕ್ಕೆ ಸ್ವಾತಂತ್ರ ಬಂದು 68 ವರ್ಷಗಳಾದರೂ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದ್ದು, ಹಕ್ಕುಗಳಿಂದ ವಂಚಿತವಾದ ದೊಡ್ಡ ಸಮೂಹವೇ ದೇಶದಲ್ಲಿದೆ. ಪ್ರಜಾಪ್ರಭುತ್ವ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂದರೆ, ಪ್ರಜಾಪ್ರಭುತ್ವ ಇನ್ನೂ ಸರಿಯಾಗಿ ನೆಲೆಯೂರಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ನಡೆಯುತ್ತದೆ ಎಂಬುದು ಜನರ ಭಾವನೆಯಾಗಿದೆ. ಈ ಭಾವನೆ ನಿಜ ಕೂಡ. ಹಿಂದೆ ಅಪರಾಧ ಪ್ರಕರಣಗಳಲ್ಲಿ ಸತ್ಯ ಹೊರಗೆಡವಲು ಆರೋಪಿಗಳಿಗೆ ಹೊಡೆಯಲಾ ಗುತ್ತಿತ್ತು. ಆಗ ಬೇರೆ ಮಾರ್ಗಗಳೇ ಇರಲಿಲ್ಲ. ಆದರೆ ಈಗ ಇಲಾಖೆಯಲ್ಲಿ ಬದಲಾವಣೆ ತಂದಿದ್ದು, ಪೊಲೀಸ್ ತರಬೇತಿ ಕೇಂದ್ರಗಳು, ಕಾಲೇಜುಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾನವ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ.

ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವುದು ಪೊಲೀಸರ ಕರ್ತವ್ಯ. ಈ ವೇಳೆ ಶೇ.100ರಷ್ಟು ಪೊಲೀಸರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಹೇಳುವುದು ತಪ್ಪು. ಶುಕ್ರವಾರ ನಡೆದ ಎಸ್ ಐ ಜಗದೀಶ್ ಮರ್ಡರ್ ಪ್ರಕರಣವನ್ನು ಉದಾಹರಿಸಿದ ಅವರು, ಇಲ್ಲಿ ಪೊಲೀಸ್ ಅಧಿಕಾರಿಯ ಮಾನವ ಹಕ್ಕು ಉಲ್ಲಂಘನೆ ಯಾಗಲಿಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಶಾಸಕ ಜಗದೀಶ್ಧಿಕುಮಾರ್, ಪ್ರವೀಣ್ ಶೆಟ್ಟಿ, ಎಂ.ಆನಂದ್ ಇತರರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT