ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಎಸ್ಟೇಟ್ ಲಾಬಿ ವಿರುದ್ಧ ಒಗ್ಗೂಡಿತು ಜನಶಕ್ತಿ

ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು. ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ...

ಬೆಂಗಳೂರು: ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು.

ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ. ಸ್ಯಾಂಕಿ ಕೆರೆಯನ್ನು ರಿಯಲ್ ಎಸ್ಟೇಟ್ ಕುಳಗಳಿಂದ ರಕ್ಷಿಸಲು ಆಗ್ರಹಿಸಿ ‘ಸೇವ್ ಸ್ಯಾಂಕಿ ಫಾರಂ’ ಆಶ್ರಯದಲ್ಲಿ ಶನಿವಾರ ಒಟ್ಟುಗೂಡಿದ್ದ ಇವರೆಲ್ಲರೂ, ಕೆರೆ ಅಂಗಳದಲ್ಲಿ ಬೃಹತ್ ಪ್ರತಿಭಟನೆಯನ್ನೇ ನಡೆಸಿದರು.

ಸ್ಯಾಂಕಿ ಕೆರೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೆರೆಯ ರಕ್ಷಣೆಗೆ ಮುಂದಾಗದ ಸರ್ಕಾರ ಮತ್ತು ಬಿಬಿಎಂಪಿ ಧೋರಣೆ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಹೋರಾಟಗಾರ ದೂರೆಸ್ವಾಮಿ ಬೆಂಗಳೂರು ಒಂದು ಕಾಲದಲ್ಲಿ ಕೆರೆಗಳ ತವರೂರಾಗಿತ್ತು. ನಗರದಲ್ಲಿ ನೂರಾರು ಕೆರೆಗಳು ಕುಡಿಯುವ ನೀರು ಪೂರೈಸುವ ಮೂಲವಾಗಿದ್ದವು. ಅದರೀಗ ಭೂಗಳ್ಳರ ಹಣದ ದಾಹಕ್ಕೆ ಕೆರೆಗಳು ಮಾಯವಾಗಿವೆ.  ಉಳಿದಿರುವ ನಾಲ್ಕಾರು ಕೆರೆಗಳನ್ನಾದರೂ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಪ್ರಾಣಿ ಮತ್ತು ಜೀವ, ಜಲಚರಗಳು ನೀರಿಗಾಗಿ ಹಾಹಾಕಾರ ಪಡಲಿವೆ," ಎಂದರು.

“ನಗರದಲ್ಲಿ ಈಗಾಗಲೇ ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಬೋರವೇಲ್ಧಿಗಳು ಬತ್ತುತ್ತಿವೆ. ಕೆರೆಗಳ ಒತ್ತುವರಿಯಿಂದ ನಗರ ಸೌಂದರ್ಯಕ್ಕೆ ಧಕ್ಕೆಯಾಗಿದೆ” ಎಂದು ಆಗ್ರಹಿಸಿದರು.
ಸಿಎಂ ಬಳಿ ನಿಯೋಗ: ನಂತರ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ಗೃಹ ಕಚೇರಿ ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಗರದ ಕಾಡು ಮಲ್ಲೇಶ್ವರದಲ್ಲಿ 7.22 ಎಕರೆ ಜಾಗದಲ್ಲಿ ವಿಸ್ತಾರವಾಗಿ ಹರಡಿರುವ ಕೆರೆ ಸಂರಕ್ಷಿಸ ಬೇಕು. ಮಂತ್ರಿ ಡೆವಲಪರ್ಸ್ ಅತಿಕ್ರಮಿಸಿ ಕೊಂಡಿದೆ. ಕೂಡಲೇ ಇದನ್ನು ತೆರವುಗೊಳಿಸಿ ಕೆರೆ ಅಭಿವೃದ್ಧಿಗೊಳಿಸಬೇಕೆಂದು ಮನವಿ
ಸಲ್ಲಿಸಿದರು. ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಲ್ಲೇಶ್ವರಂ ರೆಸಿಡೆಂಟ್ಸ್ ವೆಲ್ ಫಾರ್ ಅಸೋಸಿಯೇಷನ್, ಮಲ್ಲೇಶ್ವರಂ ಸ್ವಾಭಿಮಾನ ಇನಿಶಿಯೇಟಿವ್, ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಸದಸ್ಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT